Skip to main content

ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ) ಸ್ಥಾಪನೆಗೆ ಕಾರಣರಾದ ಬಾಬಾಸಾಹೇಬ್ ಅಂಬೇಡ್ಕರ್ -ರಘೋತ್ತಮ ಹೊ.ಬ



ಭಾರತೀಯ ರಿಸರ್ವ್ ಬ್ಯಾಂಕ್ ಅಥವಾ ಆರ್ ಬಿ ಐ ಅಕ್ಷರಶಃ ಬಾಬಾಸಾಹೇಬ್ ಅಂಬೇಡ್ಕರರ ಮೆದುಳಿನ ಕೂಸು Brain child of Babasaheb. ಹೇಗೆಂದಿರಾ? ಇಲ್ಲಿ ನೋಡಿ. ರಿಸರ್ವ್ ಬ್ಯಾಂಕ್ ಅಂದರೆ ಅರ್ಥಶಾಸ್ತ್ರ ಅಥವಾ ಎಕನಾಮಿಕ್ಸ್ ತಾನೇ? RBI ನ ಅರ್ಥಶಾಸ್ತ್ರಕ್ಕೂ ಅಥವಾ ಅರ್ಥಶಾಸ್ತ್ರದ ಹಿನ್ನೆಲೆಯ RBIಗೂ ಅಂಬೇಡ್ಕರ್ ಗೂ ಎತ್ತಣದಿಂದೆತ್ತಣ ಸಂಬಂಧ ಎಂದು ಕೇಳುವುದಾದರೆ...

ಓರ್ವ ಸಾಮಾನ್ಯ ವಿದ್ಯಾರ್ಥಿಯಾಗಿ 1913ರಲ್ಲಿ ಅಂಬೇಡ್ಕರರು ಮುಂಬಯಿನ ಎಲ್ಫಿನ್ ಸ್ಟೋನ್ ಕಾಲೇಜ್ ನಲ್ಲಿ ಬಿ.ಎ ಪದವಿ ಪಡೆದರು. ವಿಷಯ: ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ. ಮುಂದುವರೆದು ಅರ್ಥಶಾಸ್ತ್ರವನ್ನು ಪ್ರಮುಖ ವಿಷಯವಾಗಿ ತೆಗೆದುಕೊಂಡು ಅದೇ ಎಲ್ಫಿನ್ ಸ್ಟೋನ್ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದರು. ತದನಂತರ 1917ರಲ್ಲಿ ಅಂಬೇಡ್ಕರರು ಅಮೆರಿಕದ ನ್ಯೂಯಾರ್ಕ್ ನಗರದ ಕೊಲಂಬಿಯಾ ವಿವಿಯಿಂದ ಪಿಹೆಚ್‌ಡಿ ಪದವಿ ಪಡೆದರಾದರೂ ಅರ್ಥಶಾಸ್ತ್ರದ ಮೇಲಿನ ತಮ್ಮ ಅಭಿಮಾನವನ್ನು ಬಿಟ್ಟು ಕೊಡಲಿಲ್ಲ. ಈ ಹಿನ್ನೆಲೆಯಲ್ಲಿ ಅವರು 1921ರಲ್ಲಿ "ಬ್ರಿಟಿಷ್ ಭಾರತದಲ್ಲಿ ಸಾಮ್ರಾಜ್ಯಶಾಹಿ ಹಣಕಾಸಿನ ಪ್ರಾಂತೀಯ ವಿಕೇಂದ್ರಿಕರಣ" ಎಂಬ ಪ್ರೌಢ ಪ್ರಬಂಧ (thesis) ಮಂಡಿಸಿ ಅರ್ಥಶಾಸ್ತ್ರದಲ್ಲಿ ಎಂಎಸ್ಸಿ  ಪದವಿ ಪಡೆದರು. ಗಮನಿಸಿ, ಅಂಬೇಡ್ಕರರ ಪ್ರಬಂಧದ ಈ ವಿಷಯವನ್ನು ಆ ಮೂಲಕ ಭಾರತೀಯ ಹಣಕಾಸು ವ್ಯವಸ್ಥೆಗೆ ಒಂದು ರೂಪ ಕೊಡುವಲ್ಲಿ ಅವರ ಮೆದುಳಿನಲ್ಲಿ ಹುಟ್ಟಿದ ಆ ವಿಷಯವನ್ನು. ಅಂದರೆ "ಹಣಕಾಸಿನ ಪ್ರಾಂತೀಯ ವಿಕೇಂದ್ರಿಕರಣ", ಅರ್ಥಾತ್ ಹಣಕಾಸಿನ ಚಲಾವಣೆಯನ್ನು ವಿಕೇಂದ್ರೀಕರಿಸುವುದು.

ಮುಂದುವರೆದು ಇದೇ ವಿಷಯದ ಸಂಶೋಧನೆ ಮುಂದುವರೆಸಿದ ಅಂಬೇಡ್ಕರರು 1923ರಲ್ಲಿ " ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರ. ಭಾರತೀಯ ಕರೆನ್ಸಿ ಮತ್ತು ಬ್ಯಾಂಕಿಂಗ್ ನ ಇತಿಹಾಸ " ಎಂಬ ಮತ್ತೊಂದು ಪ್ರೌಢ ಪ್ರಬಂಧ ಮಂಡಿಸಿದರು. ಅಂದಹಾಗೆ ಇಂಗ್ಲೆಂಡಿನ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಬೇಡ್ಕರರ ಈ ಅದ್ಭುತ ಕೃತಿಗೆ "ಡಾಕ್ಟರ್ ಆಫ್ ಸೈನ್ಸ್ (D.Sc)" ಪದವಿ ಇತ್ತು ಗೌರವಿಸಿತು ಮತ್ತು ಅಂಬೇಡ್ಕರರ ಈ D.Sc ಪದವಿ ಪುರಸ್ಕೃತ ಈ ಕೃತಿಯನ್ನು ಲಂಡನ್ ನ "ಪಿ.ಎಸ್.ಕಿಂಗ್ ಅಂಡ್ ಕಂಪನಿ" ಪ್ರಕಾಶನ ಸಂಸ್ಥೆಯು "Problem of Rupee" ಎಂಬ ಶೀರ್ಷಿಕೆಯಲ್ಲಿ ಪುಸ್ತಕವಾಗಿ ಅದೇ ವರ್ಷ ಅಂದರೆ 1923 ರಲ್ಲಿ ಪ್ರಕಟಿಸಿತು. 

 ಹೀಗೆ ಅಂಬೇಡ್ಕರರ ಅರ್ಥಶಾಸ್ತ್ರದ ಚಿಂತನೆ, ಭಾರತದ ಹಣಕಾಸು ವ್ಯವಸ್ಥೆಯ ಸಮಸ್ಯೆ ಕುರಿತ ಈ ಸಂಶೋಧನೆ ಲಂಡನ್ ನಲ್ಲೇ ಬ್ರಿಟಿಷ್ ಆಡಳಿತಗಾರರ ಕೈಸೇರುತ್ತಲೇ ಅಂಬೇಡ್ಕರರು "ರೂಪಾಯಿಯ ಸಮಸ್ಯೆ , ಅದರ ಮೂಲ ಮತ್ತು ಪರಿಹಾರ" ಎಂದು ಹೇಳಿದ್ದರಲ್ಲ, ಅದರ ಪರಿಹಾರಾರ್ಥವಾಗಿ ಬ್ರಿಟಿಷ್ ಸರ್ಕಾರ 1926ರಲ್ಲಿ ಹಿಲ್ಟನ್ ಯಂಗ್ ರವರ ನೇತೃತ್ವದಲ್ಲಿ Royal Commission on Indian Currency and Finance ಎಂಬ ಆಯೋಗ ನೇಮಿಸಿತು. ಈ ವಿಷಯ ದಾಖಲಿಸುತ್ತ ಅಂಬೇಡ್ಕರ್ ವಾದಿ ಲೇಖಕ ಕ್ರಿಸ್ಟೋಫರ್ ಜೆಫರ್ಲೆಟ್
"ಹಾಗೆ ಭೇಟಿಕೊಟ್ಟ ಆಯೋಗದ ಪ್ರತಿಯೊಬ್ಬ ಸದಸ್ಯನ ಕೈಯಲ್ಲೂ ಕೂಡ ಆಕರ ಗ್ರಂಥವಾಗಿ (reference book) ಅಂಬೇಡ್ಕರರು ಪ್ರಕಟಿಸಿದ್ದ "ಪ್ರಾಬ್ಲಂ ಆಫ್ ರುಪೀ" ಎಂಬ ಆ ಕೃತಿ ಇತ್ತು" ಎನ್ನುತ್ತಾರೆ. 

ಈ ಹಿನ್ನೆಲೆಯಲ್ಲಿ ಆ ಆಯೋಗ ಅಂಬೇಡ್ಕರರು ಎತ್ತಿದ್ದ ಸಮಸ್ಯೆಯ ಈ ಎಳೆ ಹಿಡಿದು ಭಾರತದಲ್ಲಿ ದೇಶದಾದ್ಯಂತ ಸಂಚರಿಸಿ ಅನೇಕರಿಂದ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹಿಸಿತು. ಸ್ವತಃ ಬಾಬಾಸಾಹೇಬ್ ಅಂಬೇಡ್ಕರರು ಕೂಡ ಆ ಆಯೋಗದ ಮುಂದೆ ಖುದ್ದು ಹಾಜರಾಗಿ ಸಾಕ್ಷಿ ನುಡಿದರು, ತಮ್ಮ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಮಂಡಿಸಿದರು. (ಅಂಬೇಡ್ಕರರ ಆ ಲಿಖಿತ ಸಾಕ್ಷಿ ಕೂಡ ಭಾರತ ಸರ್ಕಾರ ಪ್ರಕಟಿಸಿರುವ ಅಂಬೇಡ್ಕರರ ಬರಹಗಳು ಭಾಷಣಗಳು ಸಂಪುಟಗಳ ಸರಣಿಯಲ್ಲಿದೆ.) 

ಹಾಗಿದ್ದರೆ ಕರೆನ್ಸಿ ಕುರಿತು ಅಂಬೇಡ್ಕರ್
ಏನು ಪ್ರತಿಪಾದಿಸಿದರು? ಈ ಬಗ್ಗೆ ಹೇಳುವ ಅವರ "ಕರೆನ್ಸಿ ನಿಯಂತ್ರಣ ಮಾಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುವುದು ಅಪಾಯಕಾರಿ. ಯಾಕೆಂದರೆ ಕರೆನ್ಸಿ ಪೂರೈಕೆಯನ್ನು ವಾಣಿಜ್ಯದ ಅಗತ್ಯಕ್ಕೆ ತಕ್ಕಂತೆ
ಹೆಚ್ಚಿಸಬೇಕು ಅಥವಾ ಕಡಿಮೆಗೊಳಿಸಬೇಕು. ಆದರೆ ಆತಂಕದ ವಿಷಯವೆಂದರೆ ಸರ್ಕಾರ ಕೆಲವೊಮ್ಮೆ ಯಾವುದೇ ಪಶ್ಚಾತ್ತಾಪ ಪಡದೆ ಅನಿಯಂತ್ರಿತವಾಗಿ ಕರೆನ್ಸಿ ಉತ್ಪಾದಿಸಬಹುದು. ಇದು ಇಡೀ ಕರೆನ್ಸಿ ವ್ಯವಸ್ಥೆಯನ್ನೇ ನಾಶಗೊಳಿಸಲಿದೆ. ಈ ನಿಟ್ಟಿನಲ್ಲಿ ಇಂತಹ ಅನೇಕ ಉದಾಹರಣೆಗಳು ಇತಿಹಾಸದಲ್ಲಿ ದಾಖಲಾಗಿವೆ"
ಆದ್ದರಿಂದ ಹಿಲ್ಟನ್ ಯಂಗ್ ಆಯೋಗದ ಮುಂದೆ ಅಂಬೇಡ್ಕರರು ಹೇಳುವುದು ಕರೆನ್ಸಿ ಪೂರೈಕೆ ಮತ್ತು ನಿಯಂತ್ರಣವನ್ನು ಸರ್ಕಾರಕ್ಕೆ ವಹಿಸುವ ಬದಲು ಕೇಂದ್ರೀಯ ಬ್ಯಾಂಕ್ ಒಂದನ್ನು ಸ್ಥಾಪಿಸಿ ಅದಕ್ಕೆ ವಹಿಸಬೇಕು ಎಂದು.

ಅಂದಹಾಗೆ ಇಂತಹ ಸಾಕ್ಷಿ ಮತ್ತು ಅಭಿಪ್ರಾಯಗಳ ಆಧಾರದ ಮೇಲೆ ಹಿಲ್ಟನ್ ಯಂಗ್ ಆಯೋಗ ತನ್ನ ಅಂತಿಮ ವರದಿ ಸಲ್ಲಿಸುತ್ತಲೇ ಕೇಂದ್ರೀಯ ಅಸೆಂಬ್ಲಿಯು 1934ರಲ್ಲಿ  RBI ಕಾಯಿದೆಯನ್ನು ಅಂಗೀಕರಿಸಿತು. ಪರಿಣಾಮ 1935 ಏಪ್ರಿಲ್ 1 ರಂದು RBI ಅಥವಾ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾಯಿತು. ಈ ಕುರಿತು ಮಾಹಿತಿ ದಾಖಲಿಸುವ ವಿಕಿಪೀಡಿಯ RBI was conceptualized as per the guidelines, working style and outlook presented by Bhimrao Ramji Ambedkar ಎನ್ನುತ್ತದೆ. 

ಪ್ರಶ್ನೆ ಎಂದರೆ ಈ ಮಾಹಿತಿ ಭಾರತೀಯರಿಗೆ ಎಷ್ಟು ತಿಳಿದಿದೆ? ಎಂಬುದು. ಏಕೆಂದರೆ ಜನಸಾಮಾನ್ಯರು ಸುಮ್ಮನೆ ನೋಟು ಎಣಿಸಿಕೊಳ್ಳುತ್ತಾರೆ, ಅಲ್ಲಿ ಕಾಣುವ Reserve Bank of India ಎಂಬ ಮುದ್ರಣ ಕಣ್ತುಂಬಿಕೊಳ್ಳುತ್ತಾರೆ. ಆದರೆ ಅದರ ಸ್ಥಾಪನೆ ಹಿಂದಿರುವ ಚಿಂತನೆ? ಬಾಬಾಸಾಹೇಬ್ ಅಂಬೇಡ್ಕರ್ ಎಂಬ ಓರ್ವ ವಿದ್ಯಾರ್ಥಿ ತನ್ನ ಬಿಎ ಪದವಿಯಿಂದ ಹಿಡಿದು ಡಿಎಸ್ಸಿ ಪದವಿವರೆಗೆ ಅದನ್ನು ಪ್ರತಿಪಾದಿಸಿದ ರೀತಿ? ಪ್ರತಿಪಾದಿಸಿ ಸ್ವತಃ ಅದರ ಸ್ಥಾಪನೆಗೆ ಸಾಕ್ಷಿ ನುಡಿದ ರೀತಿ? ನಿಜ, ಬಾಬಾಸಾಹೇಬ್ ಅಂಬೇಡ್ಕರರೇನು ತನ್ನನ್ನು RBI ಸ್ಥಾಪಕ ಎಂದು ಹೇಳಲಿ ಅಥವಾ ಜನಸಾಮಾನ್ಯರು ಹಾಗೆ ಗುರುತಿಸಲಿ ಎಂದು ಈ ಸಾಧನೆ ಮಾಡಿರಲಿಕ್ಕಿಲ್ಲ. ಅರ್ಥಶಾಸ್ತ್ರದ ಓರ್ವ ಸಂಶೋಧನಾರ್ಥಿಯಾಗಿ ತಮ್ಮ ಸಂಶೋಧನೆ ಮೂಲಕ ಆ ಕಾಲದಲ್ಲಿ ರೂಪಾಯಿ ಎದುರಿಸುತ್ತಿದ್ದ ಸಮಸ್ಯೆ ಮತ್ತು ಅದಕ್ಕೆ ಪರಿಹಾರವನ್ನು ಅವರು ಕಂಡುಹಿಡಿದರು. ಈ ನಿಟ್ಟಿನಲ್ಲಿ  ಅಂಬೇಡ್ಕರರ ಅಂತಹ RBI ಸ್ಥಾಪನೆಯ ಸಾಧನೆಯನ್ನು ನಾವು ಅಂದರೆ ಜನಸಾಮಾನ್ಯರು ಗುರುತಿಸಬೇಕು, ಇತಿಹಾಸದಲ್ಲಿ ದಾಖಲಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ನಾವು ಬಳಸುವ ಹಣಕ್ಕೆ ಮೌಲ್ಯ ಇರುವುದಿಲ್ಲ. ಏಕೆಂದರೆ ಅಂಬೇಡ್ಕರರು ಅದಕ್ಕೊಂದು ರೂಪ ಕೊಟ್ಟು ಇಂದು ನಮ್ಮ ಕೈಗೆ ಅದು ಸಿಗುವಂತೆ ಮಾಡದಿದ್ದರೆ ಅದು ಅದ್ಯಾವ ಶ್ರೀಮಂತನ ತಿಜೋರಿ ಸೇರುತ್ತಿತ್ತೋ! ಹಣ ಎಂದರೆ ಹೆಣವಿರಲಿ ನಾವೇ ಬಾಯಿ ಬಾಯಿ ಬಿಡಬೇಕಿತ್ತಷ್ಟೆ!!

Comments

Post a Comment

Popular posts from this blog

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು

  ಹಿಂದೂ ಮತ್ತು ಅಸ್ಪೃಶ್ಯನೊಬ್ಬ ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಭೇಟಿಯಾದಾಗ... "ಯಾವಾಗಲಾದರೊಮ್ಮೆ ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಜಾತಿ ತಿಳಿಯದಿದ್ದಾಗ ಜಾತಿವಾದಿ ಹಿಂದೂಗಳು ಮತ್ತು ಅಸ್ಪೃಶ್ಯರು ತುಂಬಾ ಆಪ್ತ ಸ್ನೇಹಿತರಂತೆ ವರ್ತಿಸುತ್ತಾರೆ. ಪರಸ್ಪರ ಬೀಡಿ, ಸಿಗರೆಟ್, ಹಣ್ಣುಗಳು, ಎಲೆ- ಅಡಿಕೆ ಹೀಗೆ ಅವರು ಹಂಚಿಕೊಳ್ಳುತ್ತಾರೆ. ಆದರೆ ಇದ್ದಕ್ಕಿದ್ದಂತೆ ಆ ಹಿಂದೂ ವ್ಯಕ್ತಿಗೆ ತಾನು ಇಷ್ಟು ಹೊತ್ತು ಮಾತನಾಡುತ್ತಿದ್ದ ವ್ಯಕ್ತಿ ಅಸ್ಪೃಶ್ಯ ಎಂದು ತಿಳಿಯುತ್ತಿದ್ದಂತೆ ಆತನ ಮನಸ್ಸಿನಲ್ಲಿ ದ್ವೇಷದ ಮನೋಭಾವ ಮೊಳಕೆಯೊಡೆಯುತ್ತದೆ, ತಾನು ಮೋಸಗೊಳಗಾದೆನೆಲ್ಲ ಎಂದು ಆತ ಯೋಚಿಸಲು ಆರಂಭಿಸುತ್ತಾನೆ. ಆತ ಕೋಪಗೊಳ್ಳುತ್ತಾನೆ. ಅಂತಿಮವಾಗಿ ತಾತ್ಕಾಲಿಕ ಆ ಸ್ನೇಹ ಜಗಳ ಮತ್ತು ಬೈಗುಳದ ಮೂಲಕ ಅಂತ್ಯಗೊಳ್ಳುತ್ತದೆ". -ಡಾ.ಬಿ.ಆರ್.ಅಂಬೇಡ್ಕರ್ ( Ambedkar writings and speeches, Vol.17, Part 3, Pp.132) ಕನ್ನಡಕ್ಕೆ: ರಘೋತ್ತಮ ಹೊಬ)

ಮುಂದೊಂದು ದಿನ ಎಲ್ಲರೂ ಬೌದ್ಧರಾಗಲಿದ್ದಾರೆ -ಡಾ.ಅಂಬೇಡ್ಕರ್

  "ಪ್ರತಿಯೊಂದು ಧರ್ಮವು ಉತ್ತರಿಸಬೇಕಾದ ಒಂದು ಪ್ರಶ್ನೆ ಇದೆ. ಅದೆಂದರೆ ತಳ ಸಮುದಾಯ ಮತ್ತು ದೌರ್ಜನ್ಯ ಪೀಡಿತ ಸಮುದಾಯಗಳಿಗೆ ಧರ್ಮವೊಂದು ನೀಡಬಹುದಾದ ನೈತಿಕ ಮತ್ತು ಬೌದ್ಧಿಕ ಬೆಂಬಲವಾದರು ಏನು ಎಂಬುದು? ಧರ್ಮವೊಂದು ಅಂತಹದ್ದೊಂದು ಬೆಂಬಲ ನೀಡಲಿಲ್ಲ ಎಂದರೆ ಅದು ದುರದೃಷ್ಟಕರ ಪರಿಸ್ಥಿತಿಯಲ್ಲಿ ಇದೆ ಎಂದೆ ಅರ್ಥ. ಆದ್ದರಿಂದ  ಹಿಂದೂ ಧರ್ಮವು  ಕೋಟ್ಯಾಂತರ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೈತಿಕ ಮತ್ತು ಬೌದ್ಧಿಕ ಬೆಂಬಲ ನೀಡುತ್ತದೆಯೇ? ಖಂಡಿತ ಇಲ್ಲ. ಈ ನಿಟ್ಟಿನಲ್ಲಿ ತಮಗೆ ಬೌದ್ಧಿಕ ಮತ್ತು ನೈತಿಕ ಬೆಂಬಲ ನೀಡದ ಹಿಂದೂ ಧರ್ಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರು ಇರಲು ಬಯಸುತ್ತಾರೆ ಎಂದು ಹಿಂದೂಗಳು ಅಪೇಕ್ಷೆ ಪಡಲು ಸಾಧ್ಯವೇ? ಅಂದಹಾಗೆ ಅಂತಹದ್ದೊಂದು ಅಪೇಕ್ಷೆ ಅಕ್ಷರಶಃ ವ್ಯರ್ಥದ್ದು.  "ಯಾಕೆಂದರೆ ಹಿಂದೂ ಧರ್ಮ ಅದು ಜ್ವಾಲಾಮುಖಿಯ ಮೇಲೆ ತೇಲುತ್ತಿದೆ. ಆ ನಿಟ್ಟಿನಲ್ಲಿ ಇಂದು ಅದು(ಜ್ವಾಲಾಮುಖಿ) ನಂದಿದ ಹಾಗೆ ಕಾಣುತ್ತಿದೆ. ಆದರೆ ವಾಸ್ತವ ಅದಲ್ಲ‌‌. ಮೊಂದೊಂದು ದಿನ ಈ ಕೋಟ್ಯಂತರ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ) ಮಂದಿಗೆ ತಮ್ಮ ಈ ಹೀನ ಸ್ಥಿತಿಯ ಬಗ್ಗೆ ಅರಿವಾದಾಗ ಮತ್ತು ಅದಕ್ಕೆ ಹಿಂದೂ ಧರ್ಮದ ಸಾಮಾಜಿಕ ತತ್ವ ಕಾರಣ ಎಂದು ತಿಳಿದಾಗ ಆ ಜ್ವಾಲಾಮುಖಿ ಜೀವಂತಗೊಳ್ಳಲಿದೆ. ಇದಕ್ಕೆ ಸಾಕ್ಷಿಯಾಗಿ ರೋಮನ್ ಸಾಮ್ರಾಜ್ಯದಲ್ಲಿ ಕ್ರಿಶ್ಚಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್: ಮರೆಯಬಾರದ ಮೈಸೂರು ದೊರೆ

  ನಾಲ್ವಡಿ ಕೃಷ್ಣರಾಜ ಒಡೆಯರ್ -ರಘೋತ್ತಮ ಹೊಬ "ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು" ಇದು ಬಾಬಾಸಾಹೇಬ್ ಡಾ.ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಅದರ ಭವ್ಯ ಇತಿಹಾಸ. ಇಂತಹ ಭವ್ಯ ಇತಿಹಾಸದ ನಿರ್ಮಾತೃವಾಗಿ ತನ್ಮೂಲಕ ಮಾದರಿ ಮೈಸೂರಿಗೆ ಮುನ್ನುಡಿ ಬರೆದ ಧೃವತಾರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್. ಆಳರಸರಿಗೆ ಮಾದರಿಯಾದ ರಾಜಯೋಗಿ.  ನಾಲ್ವಡಿಯವರು ಜನಿಸಿದ್ದು 1884 ರ ಜೂನ್ 4ರಂದು. ತಂದೆ ಶ್ರೀ ಚಾಮರಾಜ ಒಡೆಯರ್, ತಾಯಿ ಕೆಂಪನಂಜಮ್ಮಣ್ಣಿ (ವಾಣಿ ವಿಲಾಸ ಸನ್ನಿಧಾನ). ಬಾಲಕ ಕೃಷ್ಣರಾಜರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಮೈಸೂರಿನಲ್ಲೇ. ರಾಯಲ್ ಸ್ಕೂಲ್ ಎಂಬ ಪ್ರತ್ಯೇಕ ಶಾಲೆಯಲ್ಲಿ ಇವರ ಸಹಪಾಠಿಗಳಾಗಿದ್ದವರು ಮಿರ್ಜಾ  ಇಸ್ಮಾಯಿಲ್, ಲಕ್ಷ್ಮೀಕಾಂತರಾಜ್ ಅರಸ್, ಮುಂತಾದವರು. 1894 ರಲ್ಲಿ ತಂದೆ ಚಾಮರಾಜ ಒಡೆಯರ್ ರವರ ನಿಧನದಿಂದಾಗಿ ಬಾಲಕ ಕೃಷ್ಣರಾಜನಿಗೆ ರಾಜ್ಯದ ಹೊಣೆ ಬಿದ್ದಾಗ ಅವರಿಗೆ ಕೇವಲ 10 ವರ್ಷ. ಪೆಬ್ರವರಿ 1, 1895 ರಲ್ಲಿ ಯುವರಾಜ ಕೃಷ್ಣರಾಜರಿಗೆ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಬ್ರಿಟಿಷ್ ರಿಜೆನ್ಸಿ ಆಳ್ವಿಕೆಯಲ್ಲಿ ಮೈಸೂರಿನ ಗೌರ್ನರ್ ಮತ್ತು ಮಹಾರಾಜರ ಟ್ಯೂಟರ...