Skip to main content

ಬಾಬಾಸಾಹೇಬ್ ಡಾ.ಅಂಬೇಡ್ಕರ್‌ರವರು 1956 ಅಕ್ಟೋಬರ್14 ರಂದು ಬೌದ್ಧರಿಗೆ ಬೋಧಿಸಿದ 22 ಪ್ರತಿಜ್ಞೆಗಳು.

 


1)ನಾನು ಬ್ರಹ್ಮ, ವಿಷ್ಣು, ಮಹೇಶ್ವರ ಇವರುಗಳನ್ನು ದೇವರುಗಳು ಎಂದು ನಂಬುವುದಿಲ್ಲ, ಮತ್ತು ಅವರುಗಳನ್ನು ಪೂಜಿಸುವುದಿಲ್ಲ. 

2)ನಾನು ರಾಮ ಮತ್ತು ಕೃಷ್ಣ ಇವರುಗಳನ್ನು ದೇವರುಗಳು ಎಂದು ನಂಬುವುದಿಲ್ಲ, ಮತ್ತು ಅವರುಗಳನ್ನು ಪೂಜಿಸುವುದಿಲ್ಲ.

3)ನಾನು ಗಣಪತಿ ಮತ್ತು ಗೌರಿ ಇವರುಗಳನ್ನು ದೇವರುಗಳು ಎಂದು ನಂಬುವುದಿಲ್ಲ, ಮತ್ತು ಅವರುಗಳನ್ನು ಪೂಜಿಸುವುದಿಲ್ಲ.

4)ನಾನು ದೇವರ ಅವತಾರಗಳ ಸಿದ್ಧಾಂತದಲ್ಲಿ ನಂಬಿಕೆ ಇಡುವುದಿಲ್ಲ. 

5)ನಾನು ಬುದ್ಧ ವಿಷ್ಣುವಿನ ಅವತಾರ ಎಂಬುದನ್ನು ನಂಬುವುದಿಲ್ಲ.

6)ನಾನು ಯಾವುದೇ ಶ್ರಾದ್ಧ ಮತ್ತು ಪಿಂಡ ದಾನಗಳನ್ನು ಮಾಡುವುದಿಲ್ಲ.

7)ನಾನು ಬೌದ್ಧ ಧರ್ಮಕ್ಕೆ ಕೇಡು ತರುವ ಯಾವುದೇ ಕ್ರಿಯೆಗಳನ್ನು ಮಾಡುವುದಿಲ್ಲ. 

8)ನಾನು ಬ್ರಾಹ್ಮಣರ ಮೂಲಕ ಯಾವುದೇ ಧಾರ್ಮಿಕ ಕ್ರಿಯೆಗಳನ್ನು ನಡೆಸುವುದಿಲ್ಲ. 

9)ನಾನು ಮನುಷ್ಯರೆಲ್ಲ ಸಮಾನರು ಎಂಬುದನ್ನು ನಂಬುತ್ತೇನೆ. 

10)ನಾನು ಸಮಾನತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತೇನೆ.

11)ನಾನು ಬುದ್ಧರ ಅಷ್ಟಾಂಗ ಮಾರ್ಗವನ್ನು ಪಾಲಿಸುತ್ತೇನೆ.

12)ನಾನು ಬುದ್ಧರ ಹತ್ತು ಪಾರಮಿತ ತತ್ವಗಳನ್ನು ಅನುಸರಿಸುತ್ತೇನೆ.

13)ನಾನು ಎಲ್ಲಾ ಜೀವರಾಶಿಗಳ ಮೇಲೆ ಸಹಾನುಭೂತಿ ತೋರುತ್ತೇನೆ ಮತ್ತು ಅವುಗಳ ಮೇಲೆ ದಯೆ ಇಟ್ಟು ಅವುಗಳನ್ನು ಕಾಪಾಡುತ್ತೇನೆ.

14)ನಾನು ಕಳ್ಳತನ ಮಾಡುವುದಿಲ್ಲ.

15)ನಾನು ಸುಳ್ಳು ಹೇಳುವುದಿಲ್ಲ 

16)ನಾನು ವ್ಯಭಿಚಾರ ಮಾಡುವುದಿಲ್ಲ 

17)ನಾನು ಮದ್ಯಪಾನ ಮಾಡುವುದಿಲ್ಲ. 

18)ನಾನು ಬೌದ್ಧ ಧರ್ಮದ ಮೂರು ಮೂಲಭೂತ ತತ್ವ (ಪ್ರಜ್ಞೆ, ಕರುಣೆ ಮತ್ತು ಮೈತ್ರಿ)ಗಳ ಸಮರಸವಾದ ಸಂಯೋಜನೆಯನ್ನು ಸಾಧಿಸಲು ಜೀವನ ಪೂರ ಯತ್ನಿಸುತ್ತೇನೆ. 

19)ಈ ಮೂಲಕ ನಾನು ಮನುಕುಲದ ಏಳಿಗೆಗೆ ತಡೆಯಾಗಿರುವ, ಮನುಷ್ಯ ಮನುಷ್ಯರ ನಡುವೆ ಭೇದ ಎಣಿಸುವ, ನನ್ನನ್ನು ಕೀಳು ಎಂದು ಪರಿಗಣಿಸುವ ನನ್ನ ಹಳೆಯ ಧರ್ಮ ಹಿಂದೂ ಧರ್ಮವನ್ನು ತ್ಯಜಿಸುತ್ತಿದ್ದೇನೆ.

20)ಬೌದ್ಧ ಧರ್ಮವೇ ಸದ್ಧಮ್ಮ ಎಂಬುದನ್ನು ನಾನು ಸಂಪೂರ್ಣವಾಗಿ ನಂಬುತ್ತೇನೆ.

21)ಈ ಹಿನ್ನೆಲೆಯಲ್ಲೇ ಬೌದ್ಧ ಧರ್ಮವನ್ನು ಸ್ವೀಕರಿಸುತ್ತಿದ್ದೇನೆ ಮತ್ತು ಇದರಿಂದ ನನಗಿಂದು ಮರುಜನ್ಮ ಪಡೆದಂತೆ ಆಗಿದೆ. 

22)ಒಟ್ಟಾರೆ ಇನ್ನು ಮುಂದೆ ನಾನು ಬುದ್ಧರ ಬೋಧನೆಯ ಪ್ರಕಾರ ನಡೆದುಕೊಳ್ಳುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇನೆ.

(ಸಂಗ್ರಹ ಮತ್ತು ಅನುವಾದ: ರಘೋತ್ತಮ ಹೊ.ಬ)

(Source: Babasaheb Ambedkar writings and speeches, Vol.17, Part 3, Pp.530)

#22 ಪ್ರತಿಜ್ಞೆಗಳು


Comments

Popular posts from this blog

ಜಾತಿ ಮತ್ತು ಅಸಮಾನತೆಯನ್ನು ಬುದ್ಧರು ಹೇಗೆ ಪ್ರಶ್ನಿಸುತ್ತಾರೆಂದರೆ...

- ರಘೋತ್ತಮ ಹೊಬ ತ್ರಿಪಿಟಕಗಳಲ್ಲಿ ಅದರಲ್ಲೂ ಸುತ್ತ ಪಿಟಕದ ಅಸ್ಸಲಾಯನ ಸುತ್ತ ಎಂಬ ಕತೆಯಲ್ಲಿ ಬುದ್ಧರು ಜಾತಿ ಮತ್ತು ಅಸಮಾನತೆ ವಿರೋಧಿಸಿ ಮಾತನಾಡುತ್ತಾರೆ. ಬುದ್ಧರು ಹೇಳುವುದು "ಶ್ರೇಷ್ಠ ಕುಲದ ಮಹಿಳೆಯರು ಕೂಡ ಋತು ಚಕ್ರ ಅನುಭವಿಸುತ್ತಾರೆ, ಗರ್ಭ ಧರಿಸುತ್ತಾರೆ. ಅವರಿಗೂ ಹೆರಿಗೆಯಾಗುತ್ತದೆ, ಮಗು ಆಗುತ್ತದೆ. ಇಂತಹ ಪ್ರಾಕೃತಿಕ ಪದ್ಧತಿ ಹೊರತುಪಡಿಸಿ ಅವರಿಗೆ ಇತರೆ ಯಾವುದಾದರೂ ಬೇರೆ ವಿಧಾನ ಇದೆಯೇ? ಹಾಗಿದ್ದರೆ ಅವರು ಹೇಗೆ ಇತರರಿಗಿಂತ ಭಿನ್ನ? ಅಥವಾ ಶ್ರೇಷ್ಠ?" ಹೀಗೆ ಬುದ್ಧರು ಅಸಮಾನತೆ ಮತ್ತು ಜಾತಿಯನ್ನು ಪ್ರಶ್ನಿಸುತ್ತಾರೆ.  ಹಾಗೆ ಅದೇ ಕತೆಯಲ್ಲಿ ಬುದ್ಧರು ಹೇಳುವುದು "ಶ್ರೇಷ್ಠ ಕುಲದ ಒಬ್ಬ ಯುವಕ ಮತ್ತು ಅದೇ ಕುಲದ ಒಬ್ಬ ಕನ್ಯೆ ಇಬ್ಬರೂ ಕೂಡಿದರೆ ಮನುಷ್ಯ ಜೀವಿ ಜನಿಸದೆ ಯಾವುದಾದರೂ ಪ್ರಾಣಿ ಜನಿಸುವುದೇ? ಹೀಗಿರುವಾಗ ಅವರು ಹೇಗೆ ಶ್ರೇಷ್ಠ?". ಹೇಳಿ ಹೇಗೆ ಶ್ರೇಷ್ಠ? ***

ಶೌಚಾಲಯ ಶುಚಿಗೊಳಿಸುವುದನ್ನು "ಆ ಸಮುದಾಯ"ದವರೇ ಮಾಡಬೇಕೆ?

  ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು "ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ" ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು "ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,"  ಹೀಗೆ ನಾಲಿಗೆ ಮೇಲೆ ಹಿಡಿತವಿಲ್ಲದೆ ಮಾತಾಡುತ್ತ ಹೋದರು!  ಹೌದು, ಅವರು ಮಾತಾಡುತ್ತಿದ್ದದ್ದು ಅಸ್ಪೃಶ್ಯ ಸಮುದಾಯವಾದ ಪೌರಕಾರ್ಮಿಕ ಸಮುದಾಯದ ಮಹಿಳೆಯೊಬ್ಬರ ಬಗ್ಗೆ. ಎಷ್ಟು ಕ್ರೂರವಾಗಿ ಅವರು ಆಕೆಯ ಬಗ್ಗೆ ಮಾತನಾಡುತ್ತಿದ್ದರೆಂದರೆ ಅವಳು ಕೂಡ ಮನುಷ್ಯಳು, ಅವಳಿಗೂ ಕೂಡ ಮಾನವ ಹಕ್ಕಿದೆ, ಆಕೆಗೂ ಕೂಡ ಗೌರವ ಕೊಡಬೇಕು, ಊಹ್ಞೂಂ, ಇಂತಹ ಸಣ್ಣ ಮನೋಭಾವವೂ ಅವರಲ್ಲಿರಲಿಲ್ಲ. ಜಾತಿ ವ್ಯವಸ್ಥೆಯ ಭೀಕರ ಚಿತ್ರಣ ಅಲ್ಲಿ ಎದ್ದು  ಕಾಣುತ್ತಿತ್ತು.  ಈ ದಿಸೆಯಲ್ಲಿ ಉಕ್ಕಿಬರುವ ಪ್ರಶ್ನೆಗಳೇನೆಂದರೆ ಶೌಚಾಲಯ ಶುಚಿಗೊಳಿಸುವುದನ್ನು ಪೌರಕಾರ್ಮಿಕ ಸಮುದಾಯವೇ ಏಕೆ ಮಾಡಬೇಕು? ಆ ಕಾಯಕವನ್ನು ಎಲ್ಲಾ ಜಾತಿಯವರು ಏಕೆ ಮಾಡಬಾರದು? ಯಾಕೆಂದರೆ ಉದಾಹರಣೆಗೆ ವ್ಯಕ್ತಿಗಳು ಅವರು ಶೌಚ ಮಾಡಿದ ನಂತರ ಅವರದ್ದನ್ನು ಅವರೇ ತೊಳೆದುಕೊಳ್ಳುತ್ತಾರಲ್ಲವೇ? ಅದಕ್ಕೂ ಒಬ್ಬ ಆಳನ್ನು "ಇಲ್ಲ, ಇದನ್ನು ನಾನು ಮುಟ್ಟುವುದಿಲ್ಲ. ಇದು ಗಲೀಜು"ಎಂದು ನೇಮಿಸಿಕೊಳ್ಳುತ್ತಾರೆಯೇ? ಇಲ್ಲ. ಹೀಗಿರುವಾಗ ಅವರದ್ದನ್ನು ಅವರು ತೊಳೆದುಕೊಳ್ಳುವಾಗ ಶೌಚಾಲಯ ಶುಚಿಗೊಳಿಸಲು ನಿರ್ದಿಷ್ಟ ಸಮುದಾಯದವರನ್ನು ಯ...

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...