Skip to main content

ಸಾಮಾನ್ಯ ಉಪಾಸಕರು ಧಮ್ಮ ಪ್ರಸಾರ ಮಾಡಬೇಕು

ಡಾ.ಅಂಬೇಡ್ಕರರು ಯಾಕೆ ಭಿಕ್ಕುಗಳಿಗಿಂತ ವಿವಾಹಿತ ಸಾಮಾನ್ಯ ಉಪಾಸಕರೇ ಬೌದ್ಧ ಧರ್ಮ ಬೆಳೆಸಬೇಕು ಎಂದು ಕರೆಕೊಟ್ಟರೆಂದರೆ...



ಬ್ರಾಹ್ಮಣ ಧರ್ಮ ಮತ್ತು ಬೌದ್ಧ ಧರ್ಮ ಎರಡನ್ನು ಹೋಲಿಸುವ ಬಾಬಾಸಾಹೇಬ್ ಅಂಬೇಡ್ಕರರು ಬ್ರಾಹ್ಮಣ ಧರ್ಮ ಉಳಿದು ಬೌದ್ಧ ಧರ್ಮ ಏಕೆ ನಾಶವಾಯಿತು ಎಂಬುದಕ್ಕೆ ತಮ್ಮ "ಕ್ರಾಂತಿ ಮತ್ತು ಪ್ರತಿಕ್ರಾಂತಿ" ಕೃತಿಯಲ್ಲಿ ವಿವರಣೆ ಕೊಡುತ್ತಾ ಅವರು ಹೇಳುವುದು, ಯಾವುದೇ ಧರ್ಮ ಉಳಿಯಬೇಕಾದರೆ ಮುಖ್ಯ ಕಾರಣ priesthood ಅಥವಾ ಪುರೋಹಿತ ವರ್ಗ. ಈ ನಿಟ್ಟಿನಲ್ಲಿ ಬ್ರಾಹ್ಮಣ ಧರ್ಮದಲ್ಲಿ ಧರ್ಮ ಉಳಿಸುವ ಪುರೋಹಿತ ವೃತ್ತಿಯನ್ನು ಮದುವೆ ಆಗಿರುವ ಸಾಮಾನ್ಯ ವ್ಯಕ್ತಿಗಳೇ ಮಾಡುತ್ತಿದ್ದರು. ಅಕಸ್ಮಾತ್ ಆ ವ್ಯಕ್ತಿ ನಿಧನರಾದರೆ ಬಾಲ್ಯದಲ್ಲಿಯೇ ಉಪನಯನ ಪಡೆದಿರುವ ಆತನ ಮಗ ಆ ವೃತ್ತಿ ಮುಂದುವರಿಸುತ್ತಿದ್ದ. ಆ ಮೂಲಕ ಪುರೋಹಿತ ವರ್ಗ ಉಳಿಯುತ್ತಿತ್ತು, ಆ ಮೂಲಕ ಧರ್ಮದ ಬೆಳವಣಿಗೆ ಮುಂದುವರೆದಿರುತ್ತಿತ್ತು. ಆದರೆ ಬೌದ್ಧ ಧರ್ಮದಲ್ಲಿ ಭಿಕ್ಕು ಮದುವೆಯಾಗದಂತಿರದ ಕಾರಣ ಅವರ ನಿಧನದ ನಂತರ ಧರ್ಮ ಪ್ರಸಾರಕ್ಕೆ ಯಾರೂ ಬರುತ್ತಿರಲಿಲ್ಲ. ಅಲ್ಲೊಂದು chain break ಆಗುತ್ತಿತ್ತು. ಆ ಕಾರಣ ಬೌದ್ಧ ಧರ್ಮದಲ್ಲಿ ಪುರೋಹಿತ ವರ್ಗವಾದ ಭಿಕ್ಕುಗಳ ಸಂಖ್ಯೆ ತಲೆಮಾರಿನಿಂದ ತಲೆಮಾರಿಗೆ ಕಡಿಮೆಯಾಗುತ್ತ ಬಂದಿತು.
ಯಾವ ಮಟ್ಟಿಗೆಂದರೆ ಭಿಕ್ಕುಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತ ಹೊಸ ಭಿಕ್ಕುಗಳು ಉದಯಿಸದೆ ಬೌದ್ಧ ಧರ್ಮದ ಪ್ರಚಾರ ಮತ್ತು ಪ್ರಸಾರ ಕ್ಷೀಣಗೊಂಡಿತು.

ಹೀಗೆ ಹೇಳುತ್ತ ಇದಕ್ಕೆ ಪರಿಹಾರ ಸೂಚಿಸುವ ಅಂಬೇಡ್ಕರರು,  ಪರಿಹಾರವಾಗಿ ಬೌದ್ಧ ಧರ್ಮವನ್ನು ಪ್ರಾಟೆಸ್ಟೆಂಟ್ ಕ್ರಿಶ್ಚಿಯನ್ ಧರ್ಮದ ಮಾದರಿಯಲ್ಲಿ ವಿವಾಹಿತ ಕ್ರೈಸ್ತರೇ ಆ ಪಂಥದಲ್ಲಿ ಬೈಬಲ್ ಬೋಧಿಸುವಂತೆ ಬೌದ್ಧ ಧರ್ಮದಲ್ಲಿಯೂ ಬದಲಾವಣೆ ತರಬೇಕು. ಆ ನಿಟ್ಟಿನಲ್ಲಿ ವಿವಾಹಿತ ಉಪಾಸಕರೇ ಹೆಚ್ಚು ಹೆಚ್ಚು ಧರ್ಮ ಬೋಧಿಸುವ ಕೆಲಸವನ್ನು ಮಾಡಬೇಕು ಎಂದು ಹೇಳುತ್ತಾರೆ. ಪ್ರಶ್ನೆ ಎಂದರೆ ಬಾಬಾಸಾಹೇಬ್ ಅಂಬೇಡ್ಕರರು ಹೇಳಿರುವಂತೆ ವಿವಾಹಿತ ಉಪಾಸಕರೆ ಧರ್ಮ ಬೋಧಿಸುವ ಕ್ರಿಯೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಧಮ್ಮ ಬೋಧಕರ ಕೊರತೆಯಾದರೂ ಹೇಗಾಗುತ್ತದೆ? ಭಿಕ್ಕುಗಳು ಇಲ್ಲಾ ಅಂದರೆ ಅವರ ಜಾಗದಲ್ಲಿ ವಿವಾಹಿತ ಉಪಾಸಕರು ಆ ಕರ್ತವ್ಯ ನಿರ್ವಹಿಸುತ್ತಿರುವುದರಿಂದ chain break ಆಗುವುದೇ ಇಲ್ಲ. ಭಿಕ್ಕುಗಳು ಮಾಡುತ್ತಿದ್ದ ದೀಕ್ಷೆ ಕೊಡುವುದು, ಧಮ್ಮ ಬೋಧನೆ ಮಾಡುವುದು... ಹೀಗೆ ವಿವಾಹಿತ ಉಪಾಸಕರೇ ಅದನ್ನು ಪ್ರಾಟೆಸ್ಟೆಂಟ್ ಕ್ರೈಸ್ತ ಮಾದರಿಯಲ್ಲಿ ಮಾಡುತ್ತ ಹೋದರೆ ಧಮ್ಮ ಸಹಜವಾಗಿ ಉಳಿಯುತ್ತದೆ, ಬೆಳೆಯುತ್ತದೆ. ಬಾಬಾಸಾಹೇಬ್ ಅಂಬೇಡ್ಕರರು ಹೀಗೆ ಧಮ್ಮ ಪ್ರಸಾರ ಕಾರ್ಯದಲ್ಲಿ  ಬದಲಾವಣೆ ಸೂಚಿಸಿ ಪರಿಹಾರ ಕಂಡುಹಿಡಿದಿದ್ದಾರೆ.

ಅಂದಹಾಗೆ ಅಂಬೇಡ್ಕರರು ಹೇಳಿರುವಂತೆ ವಿವಾಹಿತ ಉಪಾಸಕರು ಧಮ್ಮ ಬೋಧಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ಖಂಡಿತ ಅಲ್ಲಿ ಬೌದ್ಧ ಧರ್ಮದ ಬೆಳವಣಿಗೆಗೆ ಯಾವುದೇ ಅಡೆತಡೆ, chain breakup ನಂತಹ ಸಂದರ್ಭ ಸೃಷ್ಟಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ವಿವಾಹಿತ ಬೌದ್ಧ ಉಪಾಸಕರು ಧಮ್ಮ ಬೋಧನೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು, ಆ ಮೂಲಕ ಬೌದ್ಧ ಧರ್ಮದ ಬೆಳವಣಿಗೆಗೆ ಬಾಬಾಸಾಹೇಬ್ ಅಂಬೇಡ್ಕರರ ಐಡಿಯಾದ ಅಡಿಯಲ್ಲಿ ಕೊಡುಗೆ ನೀಡುವ ನಿಟ್ಟಿನಲ್ಲಿ ಮುಂದಡಿ ಇಡಬೇಕು. ಆಗ ಬೌದ್ಧ ಧರ್ಮ ಪ್ರಸಾರ ಮತ್ತಷ್ಟು ವೇಗ ಪಡೆದುಕೊಳ್ಳುತ್ತದೆ, ಬೌದ್ಧರ ಸಂಖ್ಯೆ ದುಪ್ಪಟ್ಟು, ಮೂರು ಪಟ್ಟು ಬಹುಬೇಗ ಆಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಬೌದ್ಧ ಅನುಯಾಯಿ, ಬೌದ್ಧ ಉಪಾಸಕ ಬಾಬಾಸಾಹೇಬ್ ಅಂಬೇಡ್ಕರರ ಈ ಪರಿಕಲ್ಪನೆಗೆ ಹೆಚ್ಚು ಒತ್ತುಕೊಡಬೇಕು, ಧಮ್ಮ ಬೋಧಿಸುವ ನಿಟ್ಟಿನಲ್ಲಿ ಸ್ವಯಂ ತೊಡಗಿಸಿಕೊಳ್ಳಬೇಕು. 

-ರಘೋತ್ತಮ ಹೊ.ಬ

Comments

Popular posts from this blog

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...

ಶೌಚಾಲಯ ಶುಚಿಗೊಳಿಸುವುದನ್ನು "ಆ ಸಮುದಾಯ"ದವರೇ ಮಾಡಬೇಕೆ?

  ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು "ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ" ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು "ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,"  ಹೀಗೆ ನಾಲಿಗೆ ಮೇಲೆ ಹಿಡಿತವಿಲ್ಲದೆ ಮಾತಾಡುತ್ತ ಹೋದರು!  ಹೌದು, ಅವರು ಮಾತಾಡುತ್ತಿದ್ದದ್ದು ಅಸ್ಪೃಶ್ಯ ಸಮುದಾಯವಾದ ಪೌರಕಾರ್ಮಿಕ ಸಮುದಾಯದ ಮಹಿಳೆಯೊಬ್ಬರ ಬಗ್ಗೆ. ಎಷ್ಟು ಕ್ರೂರವಾಗಿ ಅವರು ಆಕೆಯ ಬಗ್ಗೆ ಮಾತನಾಡುತ್ತಿದ್ದರೆಂದರೆ ಅವಳು ಕೂಡ ಮನುಷ್ಯಳು, ಅವಳಿಗೂ ಕೂಡ ಮಾನವ ಹಕ್ಕಿದೆ, ಆಕೆಗೂ ಕೂಡ ಗೌರವ ಕೊಡಬೇಕು, ಊಹ್ಞೂಂ, ಇಂತಹ ಸಣ್ಣ ಮನೋಭಾವವೂ ಅವರಲ್ಲಿರಲಿಲ್ಲ. ಜಾತಿ ವ್ಯವಸ್ಥೆಯ ಭೀಕರ ಚಿತ್ರಣ ಅಲ್ಲಿ ಎದ್ದು  ಕಾಣುತ್ತಿತ್ತು.  ಈ ದಿಸೆಯಲ್ಲಿ ಉಕ್ಕಿಬರುವ ಪ್ರಶ್ನೆಗಳೇನೆಂದರೆ ಶೌಚಾಲಯ ಶುಚಿಗೊಳಿಸುವುದನ್ನು ಪೌರಕಾರ್ಮಿಕ ಸಮುದಾಯವೇ ಏಕೆ ಮಾಡಬೇಕು? ಆ ಕಾಯಕವನ್ನು ಎಲ್ಲಾ ಜಾತಿಯವರು ಏಕೆ ಮಾಡಬಾರದು? ಯಾಕೆಂದರೆ ಉದಾಹರಣೆಗೆ ವ್ಯಕ್ತಿಗಳು ಅವರು ಶೌಚ ಮಾಡಿದ ನಂತರ ಅವರದ್ದನ್ನು ಅವರೇ ತೊಳೆದುಕೊಳ್ಳುತ್ತಾರಲ್ಲವೇ? ಅದಕ್ಕೂ ಒಬ್ಬ ಆಳನ್ನು "ಇಲ್ಲ, ಇದನ್ನು ನಾನು ಮುಟ್ಟುವುದಿಲ್ಲ. ಇದು ಗಲೀಜು"ಎಂದು ನೇಮಿಸಿಕೊಳ್ಳುತ್ತಾರೆಯೇ? ಇಲ್ಲ. ಹೀಗಿರುವಾಗ ಅವರದ್ದನ್ನು ಅವರು ತೊಳೆದುಕೊಳ್ಳುವಾಗ ಶೌಚಾಲಯ ಶುಚಿಗೊಳಿಸಲು ನಿರ್ದಿಷ್ಟ ಸಮುದಾಯದವರನ್ನು ಯ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...