Skip to main content

ಸ್ವಾಭಿಮಾನ ಅಥವಾ ಆತ್ಮಗೌರವದ ಚಳುವಳಿ

 


-ರಘೋತ್ತಮ ಹೊ.ಬ

"ಸ್ವಾಭಿಮಾನ ಅಥವಾ ಆತ್ಮಗೌರವದ ಚಳುವಳಿ ಕಳೆದುಕೊಳ್ಳುವುದು ಏನೂ ಇಲ್ಲ, ಎಲ್ಲವೂ ಪಡೆದುಕೊಳ್ಳುವುದೇ ಆಗಿದೆ" -ಡಾ.ಬಿ.ಆರ್.ಅಂಬೇಡ್ಕರ್*

1937 ಡಿಸೆಂಬರ್ 31ರ ಮಧ್ಯಾಹ್ನ ಡಾ.ಅಂಬೇಡ್ಕರ್ ರವರು ಮಹಾರಾಷ್ಟ್ರದಲ್ಲಿ ಪಂಡರಾಪುರಕ್ಕೆ ಬರುತ್ತಾರೆ ಮತ್ತು ಆ ದಿನ ಅಲ್ಲಿ ಅವರು ಅಂದು ಸಂಘಟಿಸಲ್ಪಟ್ಟಿದ್ದ ಸಮ್ಮೇಳನದಲ್ಲಿ ಮಾತನಾಡುತ್ತಾರೆ. ಆ ಸಮ್ಮೇಳನದಲ್ಲಿ ಸುಮಾರು ಒಂದು ಸಾವಿರ ಕ್ಕೂ ಹೆಚ್ಚು ಮಹಿಳೆಯರು ಉಪಸ್ಥಿತರಿರುತ್ತಾರೆ.

ಆ ಸಂದರ್ಭದಲ್ಲಿ ಡಾ.ಅಂಬೇಡ್ಕರರು ಹೇಳುವುದು "ನಮ್ಮ ನಡುವೆ ಮೂರು ಸಮಸ್ಯೆಗಳಿವೆ. ಒಂದನೆಯದು, ಹಿಂದೂ ಸಮಾಜದಲ್ಲಿ ನಮಗೆ ಸಮಾನ ಸ್ಥಾನಮಾನ ನೀಡಲಾಗುತ್ತದೆಯೇ?. ಎರಡನೆಯದು, ರಾಷ್ಟ್ರೀಯ ಸಂಪತ್ತಿನಲ್ಲಿ ನಮಗೆ ಸಮಾನ ಪಾಲು ದೊರೆಯುತ್ತದೆಯೇ?. ಮೂರನೆಯದು, ಆತ್ಮಗೌರವ (self respect) ಮತ್ತು ನಮ್ಮ ಏಳಿಗೆಗೆ ನಾವೇ ದುಡಿಯಬೇಕಿರುವ (self help) ಈ ಚಳುವಳಿಯ ಭವಿಷ್ಯ ಏನಾಗಬಹುದು. ಮೊದಲನೆಯದರ ಬಗ್ಗೆ ಹೇಳುವುದಾದರೆ, ಜಾತಿ ವ್ಯವಸ್ಥೆ ಇರುವ ತನಕ ಹಿಂದೂ ಸಮಾಜದಲ್ಲಿ ನಮಗೆ ಸಮಾನ ಸ್ಥಾನಮಾನ ಸಿಗುವುದು ಸಾಧ್ಯವಿಲ್ಲ. ಎರಡನೆಯದರ ಬಗ್ಗೆ, ಬಂಡವಾಳಶಾಹಿ ಆಧಾರಿತ ಪಕ್ಷಗಳು ಆಳುತ್ತಿರುವ ತನಕ ರಾಷ್ಟ್ರೀಯ ಸಂಪತ್ತಿನಲ್ಲಿ ನಮಗೆ ಪಾಲು ಸಿಗುವುದು ಸಾಧ್ಯವಿಲ್ಲ. ಮೂರನೆಯದು, ಪ್ರಸ್ತುತದ ಸರ್ಕಾರಗಳು ಇರುವ ತನಕ ನಮಗೆ ಆರ್ಥಿಕ ಸ್ವಾತಂತ್ರ್ಯ ಸಿಗುವುದು ಸಾಧ್ಯವಿಲ್ಲ. ಆದ್ದರಿಂದ ಬಂಡವಾಳ ಶಾಹಿಗಳ ವಿರುದ್ಧ ಒಂದು ವೇದಿಕೆ (front) ನಿರ್ಮಿಸುವ ಅಗತ್ಯವಿದೆ. ಹಾಗೆಯೇ ಆರ್ಥಿಕ ಸ್ವಾತಂತ್ರ್ಯವನ್ನು ಗೆಲ್ಲುವ ಸಮಯ ಕೂಡ ಶೀಘ್ರದಲ್ಲೇ ನಮಗೆ ಒದಗಿ ಬರಲಿದೆ. ಆದರೆ ಒಂದಂತು ನಿಜ, ಚಳುವಳಿಯ ಭವಿಷ್ಯದ ಬಗ್ಗೆ ಹೇಳುವುದಾದರೆ ಸ್ವಾಭಿಮಾನ ಅಥವಾ ಆತ್ಮಗೌರವದ ಚಳುವಳಿ ಎಂದಿಗೂ ಕಳೆದುಕೊಳ್ಳುವುದು ಏನೂ ಇಲ್ಲ, ಎಲ್ಲವೂ ಪಡೆದುಕೊಳ್ಳುವುದೇ ಆಗಿದೆ".

(Dr.Ambedkar writings, Vol.17, Part 3, Pp.165)

ಹೀಗೆ ಹೇಳುತ್ತಾ ಡಾ.ಬಾಬಾಸಾಹೇಬ್ ಅಂಬೇಡ್ಕರರು ತಮ್ಮ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ನಾವು ಸ್ಮರಿಸಬೇಕಾದ ಒಂದು ವಿಚಾರವೆಂದರೆ ಅವರು ಅಂದು ಆರಂಭಿಸಿದ ಶೋಷಿತ ಸಮುದಾಯಗಳ ಸ್ವಾಭಿಮಾನದ ಅಥವಾ ಆತ್ಮಗೌರವ ಗಳಿಸುವ ಚಳುವಳಿ ಅದು ಎಂದಿಗೂ ಕಳೆದುಕೊಳ್ಳುವುದು ಏನೂ ಇಲ್ಲ, ನಾವು ಮಾಡುವ ಒಂದೊಂದು ಪುಟ್ಟ ಪುಟ್ಟ ಪ್ರಯತ್ನ ಎಲ್ಲವೂ ಪಡೆದುಕೊಳ್ಳುವುದೇ ಆಗಿದೆ ಎಂಬುದು.

***

Comments

Popular posts from this blog

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು

  ಹಿಂದೂ ಮತ್ತು ಅಸ್ಪೃಶ್ಯನೊಬ್ಬ ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಭೇಟಿಯಾದಾಗ... "ಯಾವಾಗಲಾದರೊಮ್ಮೆ ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಜಾತಿ ತಿಳಿಯದಿದ್ದಾಗ ಜಾತಿವಾದಿ ಹಿಂದೂಗಳು ಮತ್ತು ಅಸ್ಪೃಶ್ಯರು ತುಂಬಾ ಆಪ್ತ ಸ್ನೇಹಿತರಂತೆ ವರ್ತಿಸುತ್ತಾರೆ. ಪರಸ್ಪರ ಬೀಡಿ, ಸಿಗರೆಟ್, ಹಣ್ಣುಗಳು, ಎಲೆ- ಅಡಿಕೆ ಹೀಗೆ ಅವರು ಹಂಚಿಕೊಳ್ಳುತ್ತಾರೆ. ಆದರೆ ಇದ್ದಕ್ಕಿದ್ದಂತೆ ಆ ಹಿಂದೂ ವ್ಯಕ್ತಿಗೆ ತಾನು ಇಷ್ಟು ಹೊತ್ತು ಮಾತನಾಡುತ್ತಿದ್ದ ವ್ಯಕ್ತಿ ಅಸ್ಪೃಶ್ಯ ಎಂದು ತಿಳಿಯುತ್ತಿದ್ದಂತೆ ಆತನ ಮನಸ್ಸಿನಲ್ಲಿ ದ್ವೇಷದ ಮನೋಭಾವ ಮೊಳಕೆಯೊಡೆಯುತ್ತದೆ, ತಾನು ಮೋಸಗೊಳಗಾದೆನೆಲ್ಲ ಎಂದು ಆತ ಯೋಚಿಸಲು ಆರಂಭಿಸುತ್ತಾನೆ. ಆತ ಕೋಪಗೊಳ್ಳುತ್ತಾನೆ. ಅಂತಿಮವಾಗಿ ತಾತ್ಕಾಲಿಕ ಆ ಸ್ನೇಹ ಜಗಳ ಮತ್ತು ಬೈಗುಳದ ಮೂಲಕ ಅಂತ್ಯಗೊಳ್ಳುತ್ತದೆ". -ಡಾ.ಬಿ.ಆರ್.ಅಂಬೇಡ್ಕರ್ ( Ambedkar writings and speeches, Vol.17, Part 3, Pp.132) ಕನ್ನಡಕ್ಕೆ: ರಘೋತ್ತಮ ಹೊಬ)

ಮುಂದೊಂದು ದಿನ ಎಲ್ಲರೂ ಬೌದ್ಧರಾಗಲಿದ್ದಾರೆ -ಡಾ.ಅಂಬೇಡ್ಕರ್

  "ಪ್ರತಿಯೊಂದು ಧರ್ಮವು ಉತ್ತರಿಸಬೇಕಾದ ಒಂದು ಪ್ರಶ್ನೆ ಇದೆ. ಅದೆಂದರೆ ತಳ ಸಮುದಾಯ ಮತ್ತು ದೌರ್ಜನ್ಯ ಪೀಡಿತ ಸಮುದಾಯಗಳಿಗೆ ಧರ್ಮವೊಂದು ನೀಡಬಹುದಾದ ನೈತಿಕ ಮತ್ತು ಬೌದ್ಧಿಕ ಬೆಂಬಲವಾದರು ಏನು ಎಂಬುದು? ಧರ್ಮವೊಂದು ಅಂತಹದ್ದೊಂದು ಬೆಂಬಲ ನೀಡಲಿಲ್ಲ ಎಂದರೆ ಅದು ದುರದೃಷ್ಟಕರ ಪರಿಸ್ಥಿತಿಯಲ್ಲಿ ಇದೆ ಎಂದೆ ಅರ್ಥ. ಆದ್ದರಿಂದ  ಹಿಂದೂ ಧರ್ಮವು  ಕೋಟ್ಯಾಂತರ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೈತಿಕ ಮತ್ತು ಬೌದ್ಧಿಕ ಬೆಂಬಲ ನೀಡುತ್ತದೆಯೇ? ಖಂಡಿತ ಇಲ್ಲ. ಈ ನಿಟ್ಟಿನಲ್ಲಿ ತಮಗೆ ಬೌದ್ಧಿಕ ಮತ್ತು ನೈತಿಕ ಬೆಂಬಲ ನೀಡದ ಹಿಂದೂ ಧರ್ಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರು ಇರಲು ಬಯಸುತ್ತಾರೆ ಎಂದು ಹಿಂದೂಗಳು ಅಪೇಕ್ಷೆ ಪಡಲು ಸಾಧ್ಯವೇ? ಅಂದಹಾಗೆ ಅಂತಹದ್ದೊಂದು ಅಪೇಕ್ಷೆ ಅಕ್ಷರಶಃ ವ್ಯರ್ಥದ್ದು.  "ಯಾಕೆಂದರೆ ಹಿಂದೂ ಧರ್ಮ ಅದು ಜ್ವಾಲಾಮುಖಿಯ ಮೇಲೆ ತೇಲುತ್ತಿದೆ. ಆ ನಿಟ್ಟಿನಲ್ಲಿ ಇಂದು ಅದು(ಜ್ವಾಲಾಮುಖಿ) ನಂದಿದ ಹಾಗೆ ಕಾಣುತ್ತಿದೆ. ಆದರೆ ವಾಸ್ತವ ಅದಲ್ಲ‌‌. ಮೊಂದೊಂದು ದಿನ ಈ ಕೋಟ್ಯಂತರ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ) ಮಂದಿಗೆ ತಮ್ಮ ಈ ಹೀನ ಸ್ಥಿತಿಯ ಬಗ್ಗೆ ಅರಿವಾದಾಗ ಮತ್ತು ಅದಕ್ಕೆ ಹಿಂದೂ ಧರ್ಮದ ಸಾಮಾಜಿಕ ತತ್ವ ಕಾರಣ ಎಂದು ತಿಳಿದಾಗ ಆ ಜ್ವಾಲಾಮುಖಿ ಜೀವಂತಗೊಳ್ಳಲಿದೆ. ಇದಕ್ಕೆ ಸಾಕ್ಷಿಯಾಗಿ ರೋಮನ್ ಸಾಮ್ರಾಜ್ಯದಲ್ಲಿ ಕ್ರಿಶ್ಚಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್: ಮರೆಯಬಾರದ ಮೈಸೂರು ದೊರೆ

  ನಾಲ್ವಡಿ ಕೃಷ್ಣರಾಜ ಒಡೆಯರ್ -ರಘೋತ್ತಮ ಹೊಬ "ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು" ಇದು ಬಾಬಾಸಾಹೇಬ್ ಡಾ.ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಅದರ ಭವ್ಯ ಇತಿಹಾಸ. ಇಂತಹ ಭವ್ಯ ಇತಿಹಾಸದ ನಿರ್ಮಾತೃವಾಗಿ ತನ್ಮೂಲಕ ಮಾದರಿ ಮೈಸೂರಿಗೆ ಮುನ್ನುಡಿ ಬರೆದ ಧೃವತಾರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್. ಆಳರಸರಿಗೆ ಮಾದರಿಯಾದ ರಾಜಯೋಗಿ.  ನಾಲ್ವಡಿಯವರು ಜನಿಸಿದ್ದು 1884 ರ ಜೂನ್ 4ರಂದು. ತಂದೆ ಶ್ರೀ ಚಾಮರಾಜ ಒಡೆಯರ್, ತಾಯಿ ಕೆಂಪನಂಜಮ್ಮಣ್ಣಿ (ವಾಣಿ ವಿಲಾಸ ಸನ್ನಿಧಾನ). ಬಾಲಕ ಕೃಷ್ಣರಾಜರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಮೈಸೂರಿನಲ್ಲೇ. ರಾಯಲ್ ಸ್ಕೂಲ್ ಎಂಬ ಪ್ರತ್ಯೇಕ ಶಾಲೆಯಲ್ಲಿ ಇವರ ಸಹಪಾಠಿಗಳಾಗಿದ್ದವರು ಮಿರ್ಜಾ  ಇಸ್ಮಾಯಿಲ್, ಲಕ್ಷ್ಮೀಕಾಂತರಾಜ್ ಅರಸ್, ಮುಂತಾದವರು. 1894 ರಲ್ಲಿ ತಂದೆ ಚಾಮರಾಜ ಒಡೆಯರ್ ರವರ ನಿಧನದಿಂದಾಗಿ ಬಾಲಕ ಕೃಷ್ಣರಾಜನಿಗೆ ರಾಜ್ಯದ ಹೊಣೆ ಬಿದ್ದಾಗ ಅವರಿಗೆ ಕೇವಲ 10 ವರ್ಷ. ಪೆಬ್ರವರಿ 1, 1895 ರಲ್ಲಿ ಯುವರಾಜ ಕೃಷ್ಣರಾಜರಿಗೆ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಬ್ರಿಟಿಷ್ ರಿಜೆನ್ಸಿ ಆಳ್ವಿಕೆಯಲ್ಲಿ ಮೈಸೂರಿನ ಗೌರ್ನರ್ ಮತ್ತು ಮಹಾರಾಜರ ಟ್ಯೂಟರ...