Skip to main content

ಕ್ಷೌರ ಮಾಡಿಸಿಕೊಳ್ಳುವಾಗ ಅಸ್ಪೃಶ್ಯತಾಚರಣೆ



-ರಘೋತ್ತಮ ಹೊ.ಬ

ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ: ಮನನೊಂದ ಯುವಕರಿಂದ ಆತ್ಮಹತ್ಯೆ ಯತ್ನ ಎಂಬ ಸುದ್ದಿ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಇದಕ್ಕೆ ಪರಿಹಾರ? 

ಪರಿಹಾರವನ್ನು ವಯಕ್ತಿಕ ನೆನಪುಗಳ ಮೂಲಕವೇ ನಾನು ಬಿಚ್ಚಿಡಲು ಯತ್ನಿಸುವುದಾದರೆ, ಬಾಲ್ಯದಲ್ಲಿ ನಮ್ಮ ಊರಿನಲ್ಲಿ ವಿಶೇಷವಾಗಿ ನಮ್ಮ ಬೀದಿಯಲ್ಲಿ ನಮಗೆ ಕೂದಲು ಕತ್ತರಿಸುವ ಸಮಸ್ಯೆಯೇ ಇರಲಿಲ್ಲ! ಅಸ್ಪೃಶ್ಯತೆ ಅದು ಇದು ಏನೂ ಇರಲಿಲ್ಲ! ಕಾರಣ ನಮ್ಮದೆ ಸಮುದಾಯದ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ್ದ ಅಜ್ಜ ರತ್ನಯ್ಯ ಕೂದಲು ಕತ್ತರಿಸುವ, ಕ್ಷೌರ ಮಾಡುವ ವೃತ್ತಿ ಮಾಡುತ್ತಿದ್ದರು. ಸುಮಾರು ಅರೆ ಬರೆ ಶೈಲಿಯಲ್ಲಿ ಕೂದಲು ಕತ್ತರಿಸುತ್ತಿದ್ದ ಅವರ ಬಳಿ ಬಾಲಕರಾದ ನಮಗೆ ಹೇರ್ ಕಟಿಂಗ್ ಮಾಡಿಸಿಕೊಳ್ಳುವುದು ಕೆಲವೊಮ್ಮೆ ಹಿಂಸೆ ಎನಿಸುತ್ತಿತ್ತು. ಆದರೆ ನಮ್ಮ ಅಪ್ಪನಿಗೆ, ಬೀದಿಯ ಇತರರಿಗೆ ಅದೇ ಒಂದು ರೀತಿಯ ವರದಾನವಾಗಿತ್ತು. ಪರಿಣಾಮ ಕ್ಷೌರ ವೃತ್ತಿಗೆ ಸಂಬಂಧಿಸಿದ ಅಸ್ಪೃಶ್ಯತೆ ಒಂದು ದಿನವೂ ನಮಗೆ ಕಾಡಲಿಲ್ಲ! 

ಇವರಲ್ಲದೆ ಮತ್ತೊಬ್ಬ ಅಣ್ಣ ನಮ್ಮ ಪಕ್ಕದ ಊರಿಂದ ಬರುತ್ತಿದ್ದ ನಮ್ಮದೆ ಸಮುದಾಯದ ಸಿದ್ದಣ್ಣ ಹೇರ್ ಕಟಿಂಗ್ ಉಪಕರಣಗಳ ಸಮೇತ ವಾರಕ್ಕೊಮ್ಮೆ ಹಾಜರಾಗುತ್ತಿದ್ದ. ಸಿದ್ದಣ್ಣ ಯಾರದ್ದಾದರೂ ಜಗುಲಿ ಮೇಲೆ ಕುಳಿತುಕೊಂಡರೆಂದರೆ ಸಾಕು ಅದೇ ಆವತ್ತಿನ ಕಟಿಂಗ್ ಶಾಪ್ ಆಗುತ್ತಿತ್ತು. ಅಲ್ಲದೇ ಸಿದ್ದಣ್ಣ ತಮ್ಮ ಸ್ವಂತ ಊರಿನಲ್ಲೂ ತನ್ನದೆ ಸ್ವಂತ ಒಂದು ಹೇರ್ ಕಟಿಂಗ್ ಶಾಪ್ ಇಟ್ಟುಕೊಂಡಿದ್ದರಿಂದ ನಮಗೆ ಹಬ್ಬ ಹರಿದಿನಗಳಲ್ಲಿಯೂ ಸಮಸ್ಯೆ ಆಗುತ್ತಿರಲಿಲ್ಲ. ಸುಮಾರು 3 ಕಿ.ಮೀ ದೂರದಲ್ಲಿ ಇದ್ದ ಸಿದ್ದಣ್ಣನ ಆ ಶಾಪ್ ಗೆ ಒಮ್ಮೆ ಅಪ್ಪ ಸೈಕಲ್ ನಲ್ಲಿ ಕೂರಿಸಿಕೊಂಡು ಹೋಗಿ ನನಗೆ ಹೇರ್ ಕಟಿಂಗ್ ಮಾಡಿಸಿದ ನೆನಪು ನನಗೆ ಈಗಲೂ ಹಚ್ಚಹಸಿರಾಗಿದೆ.

ಆದ್ದರಿಂದ ಶೋಷಿತ ಸಮುದಾಯಗಳ ಜನರು ಇತರೆ ಜನಾಂಗಗಳ ಅಂಗಡಿಗಳಿಗೆ ಹೋಗಿ ಅವರು ಕಟಿಂಗ್ ಮಾಡಲಿಲ್ಲ, ಇವರು ನೀರು ಕೊಡಲಿಲ್ಲ, ದೇವಾಲಯ ಪ್ರವೇಶ ಕೊಡಲಿಲ್ಲ ಎಂದು ಹಲುಬುವ ಬದಲು ತಮ್ಮದೇ ಸ್ವಂತ ಹೇರ್ ಕಟಿಂಗ್ ಸೆಲೂನ್ ಗಳನ್ನು ತೆರೆಯಬೇಕು. ಆ ಮೂಲಕ ಸಮುದಾಯದ ಒಬ್ಬ ವ್ಯಕ್ತಿಗೆ ಒಂದು ಊರಿನಲ್ಲಿ ಒಂದು ಉದ್ಯೋಗ ಸಿಕ್ಕಂತೆ ಆಗುತ್ತದೆ ಅಸ್ಪೃಶ್ಯತೆ ಕೂಡ ತಪ್ಪುತ್ತದೆ. ಸಮುದಾಯದ ಎಲ್ಲಾ ಸದಸ್ಯರು ಅಲ್ಲಿಯೇ ಕಟಿಂಗ್ ಮಾಡಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಹಾಗೆ ಸಂಬಂಧಿಸಿದ ಆ ಹೇರ್ ಕಟಿಂಗ್ ಶಾಪ್ ತೆರೆಯುವ ವ್ಯಕ್ತಿ ಅದನ್ನು ಪಾರ್ಟಟೈಂ ಉದ್ಯೋಗದ ರೀತಿ ಮಾಡಿಕೊಂಡರೂ ಸರಿಯೇ. ಈ ದಿಸೆಯಲ್ಲಿ ಶೋಷಿತ ಸಮುದಾಯಗಳ ಮಹಿಳೆಯರು ಕೂಡ ತಮ್ಮದೇ ಸ್ವಂತ ಬ್ಯೂಟಿ ಪಾರ್ಲರ್ ಗಳನ್ನು ತೆಗೆಯುವುದು ಉಚಿತ ಮುಖ್ಯವಾಗಿ ಸ್ವಯಂ ಉದ್ಯೋಗದ ದೃಷ್ಟಿಯಲ್ಲಿ.

ಒಟ್ಟಾರೆ ಹೇರ್ ಕಟಿಂಗ್ ಶಾಪ್ ಗೆ ಸಂಬಂಧಿಸಿದ ಅಸ್ಪೃಶ್ಯತೆಯ ಹಿನ್ನೆಲೆಯಲ್ಲಿ ಶೋಷಿತ ಸಮಯ ಜನರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಬದಲಿಗೆ ಅದನ್ನೇ ಒಂದು ಚಾಲೆಂಜ್ ಆಗಿ ತೆಗೆದುಕೊಂಡು ತಾವೇ ಆ ವೃತ್ತಿಗೆ ಇಳಿಯಬೇಕು. ಆ ಮೂಲಕ ಅಸ್ಪೃಶ್ಯತೆಯಿಂದ ತಪ್ಪಿಸಿಕೊಳ್ಳಬೇಕು, ಅಲ್ಲದೇ ಸ್ವಯಂ ಉದ್ಯೋಗದ ದಾರಿಯಾಗಿಯೂ ಅದನ್ನು ಕಂಡುಕೊಳ್ಳಬೇಕು ಅಥವಾ ಕಂಡುಕೊಳ್ಳಬಹುದು.

Comments

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...