Skip to main content

ವೈದ್ಯರಿಗೆ ನಮನಗಳು

 


-ರಘೋತ್ತಮ ಹೊ.ಬ

ವೈದ್ಯರು, ಆಡು ಭಾಷೆಯಲ್ಲಿ ಡಾಕ್ಟರ್ ಗಳು ಜೀವ ಉಳಿಸುವ ಪ್ರತಿಭೆಗಳು ಅವರು. ಮನುಷ್ಯ ತನ್ನ ಏಳೆಗೆಗೆ ಉಳಿವಿಗೆ ತಾನೇ ಕಂಡುಕೊಂಡ ಶ್ರೇಷ್ಠ ವೃತ್ತಿ ಅದು. ಅದು ಇರಲಿಲ್ಲ ಎಂದರೆ ಎಲ್ಲರೂ ಎಲ್ಲದಕ್ಕೂ ದೇವರ ಮೊರೆ ಹೋಗಬೇಕಿರುತ್ತಿತ್ತು. ಆದರೆ ಹಾಗಾಗಿಲ್ಲ. 

ವೈದ್ಯ ವೃತ್ತಿಯಲ್ಲಿ ಜಾತಿ ಇಲ್ಲವೇ? ಖಂಡಿತ ಇಲ್ಲ. ನಿಮ್ಹಾನ್ಸ್ ನ ಖ್ಯಾತ ವೈದ್ಯರಾದ ಗೆಳೆಯರಾದ ಡಾ.ಲಿಂಗರಾಜುರವರು ಬಹಳ ಸ್ಪಷ್ಟವಾಗಿ ಹೇಳುವುದು "ಇಲ್ಲಿ ಕೆಲಸ ಗೊತ್ತಿರುವವರೆ ಶ್ರೇಷ್ಠರು ಜಾತಿ ಗೀತಿ ಇಲ್ಲಿ ಏನೂ ಇಲ್ಲ" ಎಂದು. ಹಾಗಿದ್ದರೆ ಈಚೆಗೆ ಅಲೋಪತಿ ವಿರುದ್ಧ ಕೆಲವರಿಂದ ಟೀಕೆಗಳು ಬರುತ್ತವಲ್ಲ? ವೈದ್ಯ ವೃತ್ತಿಯಲ್ಲೂ ಧರ್ಮ ಹುಡುಕುವವರ ಜನ ವಿರೋಧಿಗಳ ಕ್ಷುಲ್ಲಕ ನಡೆಯದು. ವಾಸ್ತವ ಏನೆಂದರೆ ಹಿಂದೆ ಭಾರತದಲ್ಲಿ ವೈದ್ಯ ವೃತ್ತಿ ಇತಿಹಾಸದಲ್ಲಿ ಆರಂಭ ಆಯಿತು. ಆದರೆ ಮೌಢ್ಯ, ಜಾತಿ ಮತ್ತು ಅಸ್ಪೃಶ್ಯತೆಗೆ ಆದ್ಯತೆ ಕೊಟ್ಟಿದ್ದರಿಂದ ಅದು ಅಲ್ಲೇ ನಿಂತಿತು. ಹೇಗೆಂದರೆ ರೋಗಿಗಳನ್ನು ಅವರ ಜಾತಿ ಮೀರಿ ಮುಟ್ಟಬೇಕಾಗುತ್ತದಲ್ಲ ಎಂದು ಅನೇಕರು ಹಿಂಜರಿಯುತ್ತಿದ್ದರಂತೆ! ಈ ಬಗ್ಗೆ ತಮಿಳುನಾಡಿನ ಪಂಡಿತ ಅಯೋಧಿ ದಾಸ್ ರವರ ಜೀವನ ಚರಿತ್ರೆಯಲ್ಲಿ ನಾವು ಕಾಣಬಹುದು. ಬಾಬಾಸಾಹೇಬ್ ಅಂಬೇಡ್ಕರರು ಕೂಡ ಜಾತಿ ಮತ್ತು ಅಸ್ಪೃಶ್ಯತೆಗೆ ಆದ್ಯತೆ ಕೊಟ್ಟಿದ್ದರಿಂದ ವೈಜ್ಞಾನಿಕ ಸಂಶೋಧನೆ ಹಿಂದುಳಿಯಿತು ಎಂದು ಒಂದೆಡೆ ಹೇಳುತ್ತಾರೆ. 

ಆದರೆ ವಸಾಹತುಶಾಹಿಗಳ ಆಗಮನದ ನಂತರ ಈಗಿನ ಮೆಡಿಸಿನ್ ಪದ್ಧತಿ ಆರಂಭವಾಯಿತು. ಇಲ್ಲಿ ನಾವು ತಿಳಿಯಬೇಕಾದ್ದೆಂದರೆ, ವೈದ್ಯ ವೃತ್ತಿಗೆ ದೇಶಗಳ ಗಡಿಯೂ ಇಲ್ಲ, ಎಲ್ಲೇ ಹೊಸ ಸಂಶೋಧನೆ ಯಾವುದೇ ರೋಗಕ್ಕೂ ನಡೆದರೂ ಅದು ಎಲ್ಲಾ ದೇಶಗಳನ್ನು ತಲುಪಬೇಕು! ಇದೇ ವೈದ್ಯ ವೃತ್ತಿಯ ವಿಶಿಷ್ಟ ಲಕ್ಷಣವಾಗಿದೆ. 

ಇನ್ನೂ ವೈದ್ಯರ ಬಗ್ಗೆ ಹೇಳುವುದಾದರೆ ಮನುಷ್ಯ ವೈದ್ಯರ ಮುಂದೆ ಸುಳ್ಳು ಹೇಳಲು ಸಾಧ್ಯವಿಲ್ಲ. ಹೇಳಿದರೂ ನಷ್ಟ ಸಂಬಂಧಿಸಿದ ವ್ಯಕ್ತಿಗೆ ಹೊರತು ವೈದ್ಯರಿಗಲ್ಲ. ವಯಕ್ತಿಕವಾಗಿ ನಾನು ಕೂಡ ಹಿಂದೆ ದಂತ ವೈದ್ಯಕೀಯ ಓದಲು ಸೇರಿದ್ದೆ ಆದರೆ ಒಂದಷ್ಟು ಶೈಕ್ಷಣಿಕ ವರ್ಷ ವ್ಯರ್ಥಮಾಡಿಕೊಂಡೆ ಹೊರತು ಬೇರೇನು ಲಾಭ ಆಗಲಿಲ್ಲ. ಹಾಗೆ ನನ್ನ ಆಸಕ್ತಿಯ ಕ್ಷೇತ್ರ ಅದಾಗಿರಲಿಲ್ಲ. ಆದರೆ ವಯಕ್ತಿಕವಾಗಿ ನನ್ನ ಬದುಕಿನ ಅನೇಕ ಕಷ್ಟದ ಸಂದರ್ಭಗಳಲ್ಲಿ ವೈದ್ಯ ವೃತ್ತಿ ನನ್ನ ಬದುಕಿಸಿದೆ. ಆರೋಗ್ಯದ ತೊಂದರೆಗಳಿಂದ ಕಾಪಾಡಿದೆ. ಸೋಜಿಗವೆಂದರೆ ಆ ಯಾವುದೇ ಡಾಕ್ಟರ್ ಗಳಿಗೆ ನಾವು ಪರಿಚಿತರಲ್ಲ, ಕೇವಲ ರೋಗಿಗಳಷ್ಟೆ! ಇದೇ ಈ ವೃತ್ತಿಯ ಶ್ರೇಷ್ಠತೆಯಾಗಿದೆ. 

ಪ್ರತಿಯೊಬ್ಬ ಪ್ರಜೆ ಕೂಡ ವೈದ್ಯರಿಗೆ ಗೌರವ ಕೊಡಬೇಕು. ನಮ್ಮ ಅಜ್ಞಾನ ಮತ್ತು ಸ್ವಾರ್ಥ ಚಿಂತನೆಗೆ ಅವರನ್ನು ದೂರಬಾರದು ಅಥವಾ ಮಾತಾಡಬಾರದು. ಹಾಗೆಯೇ ಹೆಚ್ಚು ಹೆಚ್ಚು ವೈದ್ಯರನ್ನು ಕೊಡುವ ನಿಟ್ಟಿನಲ್ಲಿ ಸಮಾಜ ಹೆಚ್ಚು ಮುತುವರ್ಜಿ ವಹಿಸಬೇಕು. ಡೊನೆಷನ್ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ಕೊಡುವುದರ ಬದಲು ಆಸಕ್ತಿ ನೋಡಿ ವೈದ್ಯಕೀಯ ಪ್ರವೇಶ ನೀಡಿ ವೈದ್ಯರನ್ನು ವ್ಯವಸ್ಥೆ ತಯಾರು ಮಾಡಬೇಕು. ಕೊವಿಡ್ ನ ಈ ಸಂಕಷ್ಟದಲ್ಲಿ ಜೀವದ ಹಂಗು ತೊರೆದು ಅವರು ನೀಡುತ್ತಿರುವ ಸೇವೆ ಬರೀ ಸೇವೆಯಲ್ಲ ಬದಲಿಗೆ ತ್ಯಾಗವಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ವೈದ್ಯರ ಹಾದಿ ಅನುಕರಿಸಬೇಕು ಅನುಸರಿಸಬೇಕು. ನಿಸ್ವಾರ್ಥದಿ ಸಮಾಜ ಚಿಕಿತ್ಸೆಯಲ್ಲಿ ತೊಡಗಿಸಿಕೊಳ್ಳಬೇಕು, ಮನುಕುಲವ ಉಳಿಸಬೇಕು. 

ಹ್ಯಾಪಿ ಡಾಕ್ಟರ್ಸ್ ಡೇ. ಡಾಕ್ಟರ್ ಗಳಿಗೆ ಶುಭವಾಗಲಿ.


Comments

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಶೌಚಾಲಯ ಶುಚಿಗೊಳಿಸುವುದನ್ನು "ಆ ಸಮುದಾಯ"ದವರೇ ಮಾಡಬೇಕೆ?

  ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು "ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ" ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು "ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,"  ಹೀಗೆ ನಾಲಿಗೆ ಮೇಲೆ ಹಿಡಿತವಿಲ್ಲದೆ ಮಾತಾಡುತ್ತ ಹೋದರು!  ಹೌದು, ಅವರು ಮಾತಾಡುತ್ತಿದ್ದದ್ದು ಅಸ್ಪೃಶ್ಯ ಸಮುದಾಯವಾದ ಪೌರಕಾರ್ಮಿಕ ಸಮುದಾಯದ ಮಹಿಳೆಯೊಬ್ಬರ ಬಗ್ಗೆ. ಎಷ್ಟು ಕ್ರೂರವಾಗಿ ಅವರು ಆಕೆಯ ಬಗ್ಗೆ ಮಾತನಾಡುತ್ತಿದ್ದರೆಂದರೆ ಅವಳು ಕೂಡ ಮನುಷ್ಯಳು, ಅವಳಿಗೂ ಕೂಡ ಮಾನವ ಹಕ್ಕಿದೆ, ಆಕೆಗೂ ಕೂಡ ಗೌರವ ಕೊಡಬೇಕು, ಊಹ್ಞೂಂ, ಇಂತಹ ಸಣ್ಣ ಮನೋಭಾವವೂ ಅವರಲ್ಲಿರಲಿಲ್ಲ. ಜಾತಿ ವ್ಯವಸ್ಥೆಯ ಭೀಕರ ಚಿತ್ರಣ ಅಲ್ಲಿ ಎದ್ದು  ಕಾಣುತ್ತಿತ್ತು.  ಈ ದಿಸೆಯಲ್ಲಿ ಉಕ್ಕಿಬರುವ ಪ್ರಶ್ನೆಗಳೇನೆಂದರೆ ಶೌಚಾಲಯ ಶುಚಿಗೊಳಿಸುವುದನ್ನು ಪೌರಕಾರ್ಮಿಕ ಸಮುದಾಯವೇ ಏಕೆ ಮಾಡಬೇಕು? ಆ ಕಾಯಕವನ್ನು ಎಲ್ಲಾ ಜಾತಿಯವರು ಏಕೆ ಮಾಡಬಾರದು? ಯಾಕೆಂದರೆ ಉದಾಹರಣೆಗೆ ವ್ಯಕ್ತಿಗಳು ಅವರು ಶೌಚ ಮಾಡಿದ ನಂತರ ಅವರದ್ದನ್ನು ಅವರೇ ತೊಳೆದುಕೊಳ್ಳುತ್ತಾರಲ್ಲವೇ? ಅದಕ್ಕೂ ಒಬ್ಬ ಆಳನ್ನು "ಇಲ್ಲ, ಇದನ್ನು ನಾನು ಮುಟ್ಟುವುದಿಲ್ಲ. ಇದು ಗಲೀಜು"ಎಂದು ನೇಮಿಸಿಕೊಳ್ಳುತ್ತಾರೆಯೇ? ಇಲ್ಲ. ಹೀಗಿರುವಾಗ ಅವರದ್ದನ್ನು ಅವರು ತೊಳೆದುಕೊಳ್ಳುವಾಗ ಶೌಚಾಲಯ ಶುಚಿಗೊಳಿಸಲು ನಿರ್ದಿಷ್ಟ ಸಮುದಾಯದವರನ್ನು ಯ...