Skip to main content

ಲಾಕ್ ಡೌನ್ ತೆರವುಗೊಳಿಸುತ್ತಿರುವ ಈ ಸಮಯ ದಲಿತರು ಬಿಸಿನೆಸ್ ಗೆ ತೆರೆದುಕೊಳ್ಳಲು ಸುಸಮಯ

 






-ರಘೋತ್ತಮ ಹೊ.ಬ


ಒಂದು ಓಟದ ಸ್ಪರ್ಧೆ ( ಅದು ಎಂದೂ ಮುಗಿಯದ ಸ್ಪರ್ಧೆ). ಅಂದಹಾಗೆ ಆ ಓಟದಲ್ಲಿ ಈಗಾಗಲೇ ನೂರಾರು ಮೈಲಿ ಓಡಿರುವವರು ಕೆಲವರು ಇನ್ನೂ ಆರಂಭದ ಗೆರೆಯಲ್ಲೇ ಅಥವಾ ಅದಕ್ಕಿಂತ ಸ್ವಲ್ಪ ಮುಂದೆ ಇರುವವರು. ಆರಂಭದ ಗೆರೆಯಲ್ಲಿ ಇರುವವರು "ನೀವು ಓಡುವಂತಿಲ್ಲ ಎಂಬ ಕಾನೂನು ನಿರ್ಬಂಧದ ಮೂಲಕ ತಡೆಯಲ್ಪಟ್ಟವರು, ಎಚ್ಚೆತ್ತುಕೊಳ್ಳುವಷ್ಟರಲ್ಲಿ ಬಹಳ ಹಿಂದೆಯೇ ಉಳಿಯಲ್ಪಟ್ಟವರು, ಈಗಲೂ ನಿಮ್ಮ ಕೈಯಲ್ಲಿ ಆಗಲ್ಲ ಎಂಬ ಆತ್ಮವಿಶ್ವಾಸ ದ ಕೊರತೆಯಿಂದ ನರಳುತ್ತಿರುವವರು..". ಖಂಡಿತ, ಈ ದೃಷ್ಟಾಂತ ದಲಿತರ ಬಿಸಿನೆಸ್ ಗೆ ಸಂಬಂಧಿಸಿದ್ದು. ಮನುಸ್ಮೃತಿಯಂತಹ ಕಾನೂನುಗಳ ಮೂಲಕ ಇವರಿಗೆ ವ್ಯಾಪಾರ ವ್ಯವಹಾರ ಮಾಡಲು ಶತಶತಮಾನಗಳು ತಡೆಯೊಡ್ಡಲಾಗಿದೆ. ಅಸ್ಪೃಶ್ಯತೆ ಮೂಲಕ " ಅಯ್ಯೋ , ನಮ್ಮ ಕೈಯಲ್ಲಿ ಆಗೋದೆ ಇಲ್ಲ " ಎಂಬ ಮಟ್ಟಕ್ಕೆ ಇವರನ್ನು ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ತಂದು ನಿಲ್ಲಿಸಲಾಗಿದೆ!

ಆದರೆ ಸದ್ಯದ ಅಪರೂಪದ ವಾಸ್ತವ ಎಂದರೆ ಕೊರೊನ ಮತ್ತು ಲಾಕ್ ಡೌನ್ ನ ಈ ಸಮಯದಲ್ಲಿ ನೂರಾರು ಮೈಲಿ ಓಡಿ ಮುಂದೆ ಹೋಗಿದ್ದವರು ಮತ್ತೆ ವಾಪಸ್ ಆರಂಭಿಕ ಗೆರೆಗೆ ಬಂದಿದ್ದಾರೆ. ದಲಿತರ ಜೊತೆಗೆ ನಿಂತಿದ್ದಾರೆ ಅಥವಾ ದಲಿತರು ಅವರ ಜೊತೆ ಇಂದು ಸ್ಪರ್ಧೆ ಮಾಡಲು ಸುಸಮಯ. ಯಥಾಪ್ರಕಾರ ದಲಿತರಿಗೆ ಬಂಡವಾಳ, ಆತ್ಮವಿಶ್ವಾಸ, ನಮ್ಮ ಕೈಯಲ್ಲಿ ಆಗುತ್ತಾ, ನಾವು ಮಾಡಬಹುದಾ ಎಂಬ ಆಲೋಚನೆಗಳು ತೊಡಕಾಗಿ ಕಾಣುತ್ತವೆ. ಆದರೆ ಸ್ಪರ್ಧೆಗೆ ಇಳಿದ ಮೇಲೆ ಭಾಗವಹಿಸಲೇಬೇಕು ಓಡಲೆ ಬೇಕು. ಓಡದಿದ್ದರೆ ಇನ್ನೆಂದೂ ವಿಮೋಚನೆ ಸಾಧ್ಯವಿಲ್ಲ. ಹಾಗೆಯೇ ನಮ್ಮನ್ಯಾರೂ ದೇವಲೋಕದಿಂದ ಅಥವಾ ಸಿನಿಮಾಗಳಲ್ಲಿ ತೋರುವಂತೆ ಅನ್ಯ ಗ್ರಹ ಜೀವಿಗಳು ಕರೆದುಕೊಂಡು ಹೋಗುವುದಿಲ್ಲ. ನಾವೇ ಓಡಬೇಕು, ಓಡಿ ಗೆಲ್ಲಬೇಕು. ಈ ನಿಟ್ಟಿನಲ್ಲಿ ಲಾಕ್ ಡೌನ್ ನ ಈ ಸಮಯ ಎಲ್ಲರ ಜೊತೆ ಸಮಾನ ಸ್ಪರ್ಧೆ ಆರಂಭಿಸಲು ಖಂಡಿತ ಸುಸಮಯ.

ಆಗಬೇಕಾದ್ದೆಂದರೆ ಮೈಕೊಡವಿ ಏಳಬೇಕಿರುವುದು. ಆದದ್ದು ಆಗುತ್ತದೆ ಒಂದು ಕೈ ನೋಡೇ ಬಿಡುವ ಎಂಬ ಚಾಲೆಂಜ್ ಈಗ ಬೇಕಿರುವುದು. ವ್ಯಾಪಾರ ವ್ಯವಹಾರ ನಷ್ಟ ಆಗುತ್ತದಾ? ಆಗಲಿ. ನಷ್ಟ ನಮಗೆ ಹೊಸದೇನಲ್ಲ ತಾನೇ? ಲಾಭ ಬಂದರೆ ? ನಮ್ಮ ಸಮುದಾಯದ ಬದುಕೇ ಬದಲಾಗುತ್ತದೆ. ದಿಕ್ಕೇ ಬದಲಾಗುತ್ತದೆ. ಅಂದರೆ ನಾವು ಕಳೆದುಕೊಳ್ಳುವುದು ಏನೂ ಇಲ್ಲ ಎಲ್ಲಾ ಪಡೆದುಕೊಳ್ಳುವುದೇ ಆಗಿದೆ. ಇದನ್ನೇ ಡಾ.ಅಂಬೇಡ್ಕರ್ ರವರು ಹೇಳಿರುವುದು. 

ಎಷ್ಟೋ ಜನ ದಲಿತರು ವಿಶೇಷವಾಗಿ ಸರ್ಕಾರಿ ನೌಕರರು ತಮ್ಮ ಮಕ್ಕಳಿಗೆ ತಮ್ಮ ಹಾಗೆ ಸರ್ಕಾರಿ ನೌಕರಿ ಕೊಡಿಸುವ ಕುರುಡು ಮಾತಾಡುತ್ತಾರೆ. ಆದರೆ ಒಂದು ವಾಸ್ತವ, ಸರ್ಕಾರಿ ನೌಕರಿ ವಂಶಪಾರಂಪರ್ಯವಲ್ಲ. ಆದರೆ ವ್ಯಾಪಾರ ವ್ಯವಹಾರ, ಬಿಸಿನೆಸ್ ವಂಶಪಾರಂಪರ್ಯ. ತಂದೆ ಮಾಡಿಟ್ಟರೆ ಮಗ ಅದನ್ನು ಮುಂದುವರೆಸಬಹುದು. ಆ ಮೂಲಕ ಸಮುದಾಯ ಕೂಡ ಶ್ರೀಮಂತ ಆಗುತ್ತದೆ. ಇಂತಹ ಶ್ರೀಮಂತರು ದಲಿತ ಸಮುದಾಯದಲ್ಲಿ ಹೆಚ್ಚು ಹೆಚ್ಚು ಬೆಳೆದರೆ ಅಲ್ಲಿ ಇಡೀ ಸಮುದಾಯಕ್ಕೆ ಆತ್ಮವಿಶ್ವಾಸ ಸಿಗುತ್ತದೆ. ನಿಂದನೆ, ಅಪಮಾನ ತಾನಾಗೇ ಕಡಿಮೆಯಾಗುತ್ತದೆ.

ಬಿಸಿನೆಸ್ ಆರಂಭಿಸುವಾಗ ನಾವು ದಲಿತರು ನಮ್ಮ ಹತ್ತಿರ ಯಾರು ಬರುತ್ತಾರೆ? ಎಂಬ ಪ್ರಶ್ನೆ ಬಂದೇ ಬರುತ್ತದೆ. ಅಂದಹಾಗೆ ನಾವು ಏನೂ ಮಾಡದೆ ಮನೆಯಲ್ಲಿ ಕುಳಿತರು ಕೂಡ ನಾವು ದಲಿತರೆ! ಆಗಲಾದರೂ ನಮ್ಮ ಬಳಿ ಯಾರಾದರೂ ಬರುತ್ತಾರಾ? ಇಲ್ಲ. ಆದ್ದರಿಂದ ನಾವು "ನಾವು ದಲಿತರು, ನಮ್ಮನ್ನು ಅಸ್ಪೃಶ್ಯತೆ ಕಾಡುತ್ತದೆ" ಎಂಬ basic ಚಿಂತನೆ ಅರಬ್ಬೀ ಸಮುದ್ರಕ್ಕೆ ಎಸೆದು ಏಳಬೇಕು. ಯಾವುದಾದರೊಂದು ಫುಟ್ ಪಾತ್ ವ್ಯಾಪಾರ ವ್ಯವಹಾರ ಆದರೂ ಸರಿ ಆರಂಭಿಸಬೇಕು. ಒಂದು ಟೀ ಅಂಗಡಿ, ಒಂದು ಹೊಟೆಲ್, ಒಂದು ದಿನಸಿ ಅಂಗಡಿ, ಬಟ್ಟೆ ಅಂಗಡಿ... ಹೀಗೆ. ಅಂತಿಮವಾಗಿ ಲೇಖನ ಲಾಭ ಬಂದೇ ಬರುತ್ತದೆ. ಈಗಲ್ಲದಿದ್ದರೂ ನಮ್ಮ ಮಕ್ಕಳ ಕಾಲಕ್ಕೆ ಮೊಮ್ಮಕ್ಕಳ ಕಾಲಕ್ಕೆ ಬಂದೇ ಬರುತ್ತದೆ. ಆಗ ನಮ್ಮ ಮುಂದಿನ ಭವಿಷ್ಯದ ಜನಾಂಗ "ನಿಮ್ಮ ತಾತ ಏನ್ ಮಾಡ್ತಿದ್ದ?" ಎಂದು ಯಾರಾದರೂ ಪ್ರಶ್ನೆ ಕೇಳಿದರೆ "ವ್ಯಾಪಾರ ವ್ಯವಹಾರ ಮಾಡ್ತಿಧ" ಎಂದು ಹೇಳುತ್ತದೆ. 

ಈ ನಿಟ್ಟಿನಲ್ಲಿ ಅವರು ಹೇಳಬೇಕಾದರೆ ಹೇಳುವಂತಾಗಬೇಕಾದರೆ ಹಾಲಿ ದಲಿತರು ಅದು ರಾಜ್ಯದಲ್ಲಿ ಒಂದು ಕೋಟಿಗೂ ಮಿಕ್ಕಿ ಒಂದು ದೇಶದ ಜನಸಂಖ್ಯೆಯಷ್ಟಿರುವ ದಲಿತರು ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಮುಂದೆ ಬರಬೇಕು. ಲಾಕ್ ಡೌನ್ ತೆರವಿನ ಈ ಸಮಯ ದಲಿತರು ವ್ಯಾಪಾರ ವ್ಯವಹಾರ ದಲ್ಲಿ ತೊಡಗಿಸಿಕೊಳ್ಳಲು ಸುಸಮಯ ಎಂಬುದನ್ನು ಅರಿಯಬೇಕು. 

***

Comments

Popular posts from this blog

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಮುಚ್ಚಿಡಲ್ಪಟ್ಟ ಅಂಬೇಡ್ಕರ್ ರ ಭವ್ಯ ಇತಿಹಾಸ -ರಘೋತ್ತಮ ಹೊ.ಬ

  ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲಿ ಹುಟ್ಟಿದರು ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು. ತಮ್ಮ ತಂದೆಯನ್ನು ನೋಡಲು ಗಾಡಿಯಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು. ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ' ಎನಿಸಿಕೊಂಡರು. ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ. ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದಷ್ಟೆ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ"ಮಹಾನ್ ಇತಿಹಾಸವನ್ನು" ಮುಚ್ಚಲಾಗುತ್ತಿದೆ!       ಹಾಗಿದ್ದರೆ ಅಂಬೇಡ್ಕರ್ ರವರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಅಧ್ಯಕ್ಷ   ಜಾರ್ಜ್ ಬುಷ್ "ಗಾಂಧಿ, ಠಾಗೋರ್ ಮತ್ತು ನೆಹರೂ"ರವರುಗಳನ್ನು ನವಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್ ರವರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕುಬ್ಜರನ್ನಾಗಿಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವಾಗ ಬುಷ್‍ ರಂತಹವರು ಇದಕ್ಕಿಂತ ಹೆಚ್ಚ...