Skip to main content

ವ್ಯಕ್ತಿಪೂಜೆ ಮಾಡುವ ಹಾಗಿದ್ದರೆ ಕೇವಲ ಬಾಬಾಸಾಹೇಬ್ ಅಂಬೇಡ್ಕರರನ್ನು ಮಾತ್ರ ಪೂಜಿಸೋಣ

 


-ರಘೋತ್ತಮ ಹೊ.ಬ

ವ್ಯಕ್ತಿಪೂಜೆ (Hero Worship) ಬಗ್ಗೆ ಬಾಬಾಸಾಹೇಬ್ ಅಂಬೇಡ್ಕರ್ ರು ತಮ್ಮ "ರಾನಡೆ, ಗಾಂಧಿ ಮತ್ತು ಜಿನ್ನಾ" ಕೃತಿಯಲ್ಲಿ ಹೇಳಿದ್ದಾರೆ. ವ್ಯಕ್ತಿಯೊಬ್ಬನಲ್ಲಿ ಬುದ್ಧಿವಂತಿಕೆ ಇದ್ದರಷ್ಟೆ ಸಾಲದು ಆತ ಪ್ರಾಮಾಣಿಕನಾಗಿಯೂ ಇರಬೇಕು ಎನ್ನುವ ಬಾಬಾಸಾಹೇಬರು ಈ ನಿಟ್ಟಿನಲ್ಲಿ ವ್ಯಕ್ತಿಪೂಜೆ ಭಾರತದಲ್ಲಿ ವ್ಯಾಪಕವಾಗಿ ಇರುವುದನ್ನು ಉಲ್ಲೇಖಿಸುತ್ತಾರೆ‌. ಅಂಬೇಡ್ಕರರು ಕಂಡುಕೊಂಡಂತೆ ವ್ಯಕ್ತಿಪೂಜೆ ಭಾರತದಲ್ಲಿ ವ್ಯಾಪಕವಾಗಿ ಇರಲು ಮುಖ್ಯ ಕಾರಣ ಇಲ್ಲಿರುವ ವಿಗ್ರಹ ಪೂಜೆಯಾಗಿದೆ. ಇದಕ್ಕೆ ಪೂರಕವಾಗಿ ಬಾಬಾಸಾಹೇಬ ಅಂಬೇಡ್ಕರರು ಹೇಳುವುದು "ವ್ಯಕ್ತಿಪೂಜೆಯು ಭಾರತದ ರಾಜಕೀಯದ ದುರದೃಷ್ಟಕರ ವಾಸ್ತವವಾಗಿದ್ದು, ಅಂತಹ ವ್ಯಕ್ತಿಪೂಜೆಯು ಭಕ್ತನೊಬ್ಬನ ನೈತಿಕ ಕುಸಿತಕ್ಕೆ ಕಾರಣವಾಗುತ್ತದಲ್ಲದೆ ದೇಶಕ್ಕೂ ಅಪಾಯಕಾರಿಯಾಗಿದೆ" ಎನ್ನುತ್ತಾರೆ.(ಡಾ.ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂಪುಟ-1 ಪುಟ 230).

ದುರಂತವೆಂದರೆ ಅಂಬೇಡ್ಕರರು ಅಂದು ಎಚ್ಚರಿಕೆ ಕೊಟ್ಟ ವ್ಯಕ್ತಿಪೂಜೆ(Hero Worship) ಶೋಷಿತ ಸಮುದಾಯಗಳ ಪ್ರಸ್ತುತ ದಿನಗಳ ನಮ್ಮ ಸುತ್ತಮುತ್ತಲಿನ ರಾಜಕಾರಣಕ್ಕೂ ಅಮರಿಕೊಂಡಿದೆ. ಯಾವಮಟ್ಟಿಗೆಂದರೆ ವ್ಯಕ್ತಿಯೋರ್ವನನ್ನು ಸತತ ಪೂಜಿಸಿದ ಸಮುದಾಯವೊಂದು ಇಂದು ದಿಕ್ಕೆಟ್ಟು ಕೂತಿದೆ‌. ವ್ಯಕ್ತಿಯ ತಪ್ಪು ನಿರ್ಧಾರಗಳಿಗಾಗಿ ಆ ಸಮುದಾಯ ಇಂದು ತನ್ನನ್ನು ತಾನು ಶಪಿಸಿಕೊಳ್ಳುತ್ತಿದೆ. ಎಷ್ಟೋ ನೌಕರರು ಡಿಪ್ರೆಶನ್ ಗೆ ಒಳಗಾಗಿದ್ದಾರೆ ಎಂದು ಸ್ನೇಹಿತರೊಬ್ಬರು ತಿಳಿಸಿದರು. ಆ ಮಟ್ಟಿಗೆ ವ್ಯಕ್ತಿಪೂಜೆ ಪ್ರಸ್ತುತ ನಮ್ಮ ಸುತ್ತಲಿನ ನಮ್ಮದೇ ಸಮುದಾಯವನ್ನು ಇಂದು ಅಸಹಾಯಕ ಸ್ಥಿತಿಗೆ ತಳ್ಳಿದೆ. ಇದೇ ಕಾರಣಕ್ಕೆ ಬಾಬಾಸಾಹೇಬ್ ಅಂಬೇಡ್ಕರರು ಅಂದು ವ್ಯಕ್ತಿಪೂಜೆ ಅಪಾಯಕಾರಿ (dangerous) ಎಂದದ್ದು ಮತ್ತು ಅದನ್ನು ಅರಿಯುವಲ್ಲಿ ನಾವು ಎಡವಿದ್ದು.

ಈ ನಿಟ್ಟಿನಲ್ಲಿ ಇನ್ನು ಮುಂದಾದರು ನಾವು ಶೋಷಿತ ಸಮುದಾಯಗಳು ಯಾವುದೇ ವ್ಯಕ್ತಿಪೂಜೆಗೆ, ಆ ರೋಗಕ್ಕೆ ಈಡಾಗುವುದು ಬೇಡ. ಯಾಕೆಂದರೆ ವ್ಯಕ್ತಿಯೋರ್ವ ಶ್ರೇಷ್ಠ ವ್ಯಕ್ತಿ ಎನಿಸಿಕೊಳ್ಳಬೇಕಾದರೆ ಬಾಬಾಸಾಹೇಬ್ ಅಂಬೇಡ್ಕರರು ಹೇಳುವಂತೆ ಆತನಲ್ಲಿ ಬುದ್ಧಿವಂತಿಕೆ ಜೊತೆಗೆ ಪ್ರಾಮಾಣಿಕತೆಯೂ ಇರಬೇಕು. ದುರಂತ ಇಂದಿನ ಜನರಲ್ಲಿ ಪ್ರಾಮಾಣಿಕತೆ ಇಲ್ಲ‌. ಹಾಗೆ ಅಂತಹ ವ್ಯಕ್ತಿಗಳು ಜವಾಬ್ದಾರಿಯುತತನವನ್ನು (accountable) ಕೂಡ ಹೊಂದಿರಬೇಕು ಎಂದು ಅಂಬೇಡ್ಕರರ ಹೇಳುತ್ತಾರೆ‌‌. ಆದರೆ ಇಂದಿನ ದಿನಗಳಲ್ಲಿ ಅಂತಹ ಸೋಕಾಲ್ಡ್ ವ್ಯಕ್ತಿಪೂಜೆ ಮಾಡಿಸಿಕೊಂಡ ವ್ಯಕ್ತಿಗಳಲ್ಲಿ ಜವಾಬ್ದಾರಿಯುತತನ ಶೂನ್ಯತೆಯ ಮಟ್ಟದ್ದಾಗಿದೆ.

ಆದ್ದರಿಂದ ಈ ದಿನಗಳಲ್ಲಿ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳು, ನೌಕರರು ಇನ್ನು ಮುಂದೆ ತಮ್ಮ ಸಮುದಾಯಗಳ ಯಾರನ್ನೂ ವ್ಯಕ್ತಿ ಪೂಜೆ ಮಾಡುವ ಅಗತ್ಯವಿಲ್ಲ, ಮಾಡಿ ಅಂಥವರ ನಡವಳಿಕೆಗಳಿಂದ ನಿರಾಶರಾಗಿ ಖಿನ್ನತೆಗೊಳಗಾಗುವ ಅಗತ್ಯವಿಲ್ಲ‌. ಹಾಗೇನಾದರೂ ವ್ಯಕ್ತಿಪೂಜೆ ಮಾಡಲೇಬೇಕು ಎಂದರೆ ಕೇವಲ ಬಾಬಾಸಾಹೇಬ್ ಅಂಬೇಡ್ಕರರನ್ನು ಮಾತ್ರ ಪೂಜಿಸೋಣ. ಇತರರತ್ತ ಕಣ್ಣೆತ್ತಿಯೂ ನೋಡದಿರೋಣ ಮತ್ತು ಅಂತಹವರ ಬೇಜವಾಬ್ದಾರಿ ನಡವಳಿಕೆಗಳಿಗೆ ನಿರ್ಲಕ್ಷ್ಯದ ಚಾಟಿ ಬೀಸಿ ಮುಂದೆ ಸಾಗೋಣ.

ಜೈಭೀಮ್.


Comments

Post a Comment

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...