Skip to main content

ಬಾಬಾಸಾಹೇಬ್ ಅಂಬೇಡ್ಕರ್ ನುಡಿಮುತ್ತುಗಳು

ಅಸ್ಪೃಶ್ಯ ಆತ ಎಷ್ಟೇ ಬೆಳೆದರೂ...

"ಒಂದು ಬಗೆಯ ತಾರತಮ್ಯವಿದೆ ಅದು ತುಂಬ ಸೂಕ್ಷ್ಮ, ಆದಾಗ್ಯೂ ಅದು ವಾಸ್ತವ. ಆ ತಾರತಮ್ಯದಲ್ಲಿ ಪ್ರತಿಭಾವಂತ, ಅರ್ಹ ಅಸ್ಪೃಶ್ಯನ ಸ್ಥಾನ ಮತ್ತು ಘನತೆಯನ್ನು ಕುಗ್ಗಿಸುವ ವ್ಯವಸ್ಥಿತ ತಂತ್ರವಿರುತ್ತದೆ. ಉದಾಹರಣೆಗೆ ಒಬ್ಬ ಹಿಂದೂ ನೇತಾರನನ್ನು ಭಾರತದ ಶ್ರೇಷ್ಠ ನೇತಾರ ಎನ್ನಲಾಗುತ್ತದೆ ಆದರೆ ಯಾರೂ ಕೂಡ ಆತನನ್ನು ಕಾಶ್ಮೀರಿ ಬ್ರಾಹ್ಮಣರ ನೇತಾರ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಅಕಸ್ಮಾತ್ ಆ ನೇತಾರ ಅಸ್ಪೃಶ್ಯ ಸಮುದಾಯದವನಾಗಿದ್ದರೆ ಆತನನ್ನು ಅಸ್ಪೃಶ್ಯರ ನೇತಾರ ಎಂದಷ್ಟೇ ಹೇಳಲಾಗುತ್ತದೆಯೇ ಹೊರತು  ಆತನನ್ನು ಭಾರತದ ನೇತಾರ ಎನ್ನಲಾಗುವುದಿಲ್ಲ! ಹಾಗೆಯೇ ಒಬ್ಬ ಹಿಂದೂ ವೈದ್ಯನನ್ನು ಭಾರತದ ಶ್ರೇಷ್ಠ ವೈದ್ಯ ಎನ್ನಲಾಗುತ್ತದೆ, ಯಾರೂ ಕೂಡ ಆತನನ್ನು ಅಯ್ಯಂಗಾರ್ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಆದರೆ ಅದೇ ವೈದ್ಯ ಅಕಸ್ಮಾತ್ ಅಸ್ಪೃಶ್ಯ ನಾಗಿದ್ದರೆ ಆತನನ್ನು ಹಾಗೆಯೇ ಕರೆಯಲಾಗುತ್ತದೆ, ಅಸ್ಪೃಶ್ಯ ವೈದ್ಯ ಎಂದೇ ಸಂಬೋಧಿಸಲಾಗುತ್ತದೆ. ಅಂತೆಯೇ ಒಬ್ಬ ಹಿಂದೂ ಹಾಡುಗಾರನನ್ನು ಭಾರತದ ಶ್ರೇಷ್ಠ ಹಾಡುಗಾರ ಎಂದು ವರ್ಣಿಸಲಾಗುತ್ತದೆ ಮತ್ತು ಅದೇ ಹಾಡುಗಾರ ಅಸ್ಪೃಶ್ಯನಾಗಿದ್ದರೆ ಆತನನ್ನು ಅಸ್ಪೃಶ್ಯ ಹಾಡುಗಾರ ಅಷ್ಟೇ ಎಂದು ಕರೆಯಲಾಗುತ್ತದೆ. ಹಾಗೆಯೇ ಒಬ್ಬ ಹಿಂದೂ ಕುಸ್ತಿ ಪಟುವನ್ನೂ ಅಷ್ಟೆ ಭಾರತದ ಶ್ರೇಷ್ಠ ಜಿಮ್ನಾಸ್ಟ್ ಎನ್ನಲಾಗುತ್ತದೆ ಅಕಸ್ಮಾತ್ ಆತ ಅಸ್ಪೃಶ್ಯ ನಾಗಿದ್ದರೆ ಆತನನ್ನು ಅಸ್ಪೃಶ್ಯ ಜಿಮ್ನಾಸ್ಟ್ ಎಂದೇ ಕರೆಯಲಾಗುತ್ತದೆ".

  "ಈ ನಿಟ್ಟಿನಲ್ಲಿ ಮೇಲೆ ಹೇಳಿದ ಈ ಮಾದರಿಯ ತಾರತಮ್ಯದ ಮೂಲ ಇರುವುದು ಅಸ್ಪೃಶ್ಯರು ಅದೆಷ್ಟೇ ಶ್ರೇಷ್ಠತೆಯನ್ನು ಸಾಧಿಸಲಿ ಅವರು ಕೀಳು ಜನರು ಎನ್ನುವ ಹಿಂದೂಗಳ ದೃಷ್ಟಿಕೋನದಲ್ಲಿ. ಈ ದಿಸೆಯಲ್ಲಿ ಅಸ್ಪೃಶ್ಯ ಸಮುದಾಯದ ಶ್ರೇಷ್ಠ ವ್ಯಕ್ತಿಗಳು ಅವರು ಅಸ್ಪೃಶ್ಯ ಸಮುದಾಯದಲ್ಲಷ್ಟೆ ಶ್ರೇಷ್ಠರು ಅವರು ಹಿಂದೂ ಶ್ರೇಷ್ಠ ವ್ಯಕ್ತಿಗಳಿಗಿಂತ ಶ್ರೇಷ್ಠರಾಗುವುದಿರಲಿ ಅವರ ಸಮಕ್ಕೂ ಕೂಡ ಏರಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈ ಬಗೆಯ ತಾರತಮ್ಯ ಗುಣಲಕ್ಷಣದಲ್ಲಿ ಸಾಮಾಜಿಕತೆಯದಾಗಿದ್ದರೂ  ಅದು ಆರ್ಥಿಕ ತಾರತಮ್ಯದ ಅಪಮಾನವಲ್ಲದೆ ಬೇರೇನಲ್ಲ."

--ಬಾಬಾಸಾಹೇಬ್ ಅಂಬೇಡ್ಕರ್. (AW&S, vol.5, Pp.109) 

ಕನ್ನಡಕ್ಕೆ:  ರಘೋತ್ತಮ ಹೊಬ (೨೯-೮-೧೬)

Comments

Popular posts from this blog

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಮುಚ್ಚಿಡಲ್ಪಟ್ಟ ಅಂಬೇಡ್ಕರ್ ರ ಭವ್ಯ ಇತಿಹಾಸ -ರಘೋತ್ತಮ ಹೊ.ಬ

  ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲಿ ಹುಟ್ಟಿದರು ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು. ತಮ್ಮ ತಂದೆಯನ್ನು ನೋಡಲು ಗಾಡಿಯಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು. ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ' ಎನಿಸಿಕೊಂಡರು. ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ. ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದಷ್ಟೆ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ"ಮಹಾನ್ ಇತಿಹಾಸವನ್ನು" ಮುಚ್ಚಲಾಗುತ್ತಿದೆ!       ಹಾಗಿದ್ದರೆ ಅಂಬೇಡ್ಕರ್ ರವರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಅಧ್ಯಕ್ಷ   ಜಾರ್ಜ್ ಬುಷ್ "ಗಾಂಧಿ, ಠಾಗೋರ್ ಮತ್ತು ನೆಹರೂ"ರವರುಗಳನ್ನು ನವಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್ ರವರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕುಬ್ಜರನ್ನಾಗಿಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವಾಗ ಬುಷ್‍ ರಂತಹವರು ಇದಕ್ಕಿಂತ ಹೆಚ್ಚ...