Skip to main content

ಬಾಬಾಸಾಹೇಬ್ ಅಂಬೇಡ್ಕರ್ ನುಡಿಮುತ್ತುಗಳು

ಅಸ್ಪೃಶ್ಯ ಆತ ಎಷ್ಟೇ ಬೆಳೆದರೂ...

"ಒಂದು ಬಗೆಯ ತಾರತಮ್ಯವಿದೆ ಅದು ತುಂಬ ಸೂಕ್ಷ್ಮ, ಆದಾಗ್ಯೂ ಅದು ವಾಸ್ತವ. ಆ ತಾರತಮ್ಯದಲ್ಲಿ ಪ್ರತಿಭಾವಂತ, ಅರ್ಹ ಅಸ್ಪೃಶ್ಯನ ಸ್ಥಾನ ಮತ್ತು ಘನತೆಯನ್ನು ಕುಗ್ಗಿಸುವ ವ್ಯವಸ್ಥಿತ ತಂತ್ರವಿರುತ್ತದೆ. ಉದಾಹರಣೆಗೆ ಒಬ್ಬ ಹಿಂದೂ ನೇತಾರನನ್ನು ಭಾರತದ ಶ್ರೇಷ್ಠ ನೇತಾರ ಎನ್ನಲಾಗುತ್ತದೆ ಆದರೆ ಯಾರೂ ಕೂಡ ಆತನನ್ನು ಕಾಶ್ಮೀರಿ ಬ್ರಾಹ್ಮಣರ ನೇತಾರ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಅಕಸ್ಮಾತ್ ಆ ನೇತಾರ ಅಸ್ಪೃಶ್ಯ ಸಮುದಾಯದವನಾಗಿದ್ದರೆ ಆತನನ್ನು ಅಸ್ಪೃಶ್ಯರ ನೇತಾರ ಎಂದಷ್ಟೇ ಹೇಳಲಾಗುತ್ತದೆಯೇ ಹೊರತು  ಆತನನ್ನು ಭಾರತದ ನೇತಾರ ಎನ್ನಲಾಗುವುದಿಲ್ಲ! ಹಾಗೆಯೇ ಒಬ್ಬ ಹಿಂದೂ ವೈದ್ಯನನ್ನು ಭಾರತದ ಶ್ರೇಷ್ಠ ವೈದ್ಯ ಎನ್ನಲಾಗುತ್ತದೆ, ಯಾರೂ ಕೂಡ ಆತನನ್ನು ಅಯ್ಯಂಗಾರ್ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಆದರೆ ಅದೇ ವೈದ್ಯ ಅಕಸ್ಮಾತ್ ಅಸ್ಪೃಶ್ಯ ನಾಗಿದ್ದರೆ ಆತನನ್ನು ಹಾಗೆಯೇ ಕರೆಯಲಾಗುತ್ತದೆ, ಅಸ್ಪೃಶ್ಯ ವೈದ್ಯ ಎಂದೇ ಸಂಬೋಧಿಸಲಾಗುತ್ತದೆ. ಅಂತೆಯೇ ಒಬ್ಬ ಹಿಂದೂ ಹಾಡುಗಾರನನ್ನು ಭಾರತದ ಶ್ರೇಷ್ಠ ಹಾಡುಗಾರ ಎಂದು ವರ್ಣಿಸಲಾಗುತ್ತದೆ ಮತ್ತು ಅದೇ ಹಾಡುಗಾರ ಅಸ್ಪೃಶ್ಯನಾಗಿದ್ದರೆ ಆತನನ್ನು ಅಸ್ಪೃಶ್ಯ ಹಾಡುಗಾರ ಅಷ್ಟೇ ಎಂದು ಕರೆಯಲಾಗುತ್ತದೆ. ಹಾಗೆಯೇ ಒಬ್ಬ ಹಿಂದೂ ಕುಸ್ತಿ ಪಟುವನ್ನೂ ಅಷ್ಟೆ ಭಾರತದ ಶ್ರೇಷ್ಠ ಜಿಮ್ನಾಸ್ಟ್ ಎನ್ನಲಾಗುತ್ತದೆ ಅಕಸ್ಮಾತ್ ಆತ ಅಸ್ಪೃಶ್ಯ ನಾಗಿದ್ದರೆ ಆತನನ್ನು ಅಸ್ಪೃಶ್ಯ ಜಿಮ್ನಾಸ್ಟ್ ಎಂದೇ ಕರೆಯಲಾಗುತ್ತದೆ".

  "ಈ ನಿಟ್ಟಿನಲ್ಲಿ ಮೇಲೆ ಹೇಳಿದ ಈ ಮಾದರಿಯ ತಾರತಮ್ಯದ ಮೂಲ ಇರುವುದು ಅಸ್ಪೃಶ್ಯರು ಅದೆಷ್ಟೇ ಶ್ರೇಷ್ಠತೆಯನ್ನು ಸಾಧಿಸಲಿ ಅವರು ಕೀಳು ಜನರು ಎನ್ನುವ ಹಿಂದೂಗಳ ದೃಷ್ಟಿಕೋನದಲ್ಲಿ. ಈ ದಿಸೆಯಲ್ಲಿ ಅಸ್ಪೃಶ್ಯ ಸಮುದಾಯದ ಶ್ರೇಷ್ಠ ವ್ಯಕ್ತಿಗಳು ಅವರು ಅಸ್ಪೃಶ್ಯ ಸಮುದಾಯದಲ್ಲಷ್ಟೆ ಶ್ರೇಷ್ಠರು ಅವರು ಹಿಂದೂ ಶ್ರೇಷ್ಠ ವ್ಯಕ್ತಿಗಳಿಗಿಂತ ಶ್ರೇಷ್ಠರಾಗುವುದಿರಲಿ ಅವರ ಸಮಕ್ಕೂ ಕೂಡ ಏರಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈ ಬಗೆಯ ತಾರತಮ್ಯ ಗುಣಲಕ್ಷಣದಲ್ಲಿ ಸಾಮಾಜಿಕತೆಯದಾಗಿದ್ದರೂ  ಅದು ಆರ್ಥಿಕ ತಾರತಮ್ಯದ ಅಪಮಾನವಲ್ಲದೆ ಬೇರೇನಲ್ಲ."

--ಬಾಬಾಸಾಹೇಬ್ ಅಂಬೇಡ್ಕರ್. (AW&S, vol.5, Pp.109) 

ಕನ್ನಡಕ್ಕೆ:  ರಘೋತ್ತಮ ಹೊಬ (೨೯-೮-೧೬)

Comments

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಶೌಚಾಲಯ ಶುಚಿಗೊಳಿಸುವುದನ್ನು "ಆ ಸಮುದಾಯ"ದವರೇ ಮಾಡಬೇಕೆ?

  ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು "ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ" ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು "ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,"  ಹೀಗೆ ನಾಲಿಗೆ ಮೇಲೆ ಹಿಡಿತವಿಲ್ಲದೆ ಮಾತಾಡುತ್ತ ಹೋದರು!  ಹೌದು, ಅವರು ಮಾತಾಡುತ್ತಿದ್ದದ್ದು ಅಸ್ಪೃಶ್ಯ ಸಮುದಾಯವಾದ ಪೌರಕಾರ್ಮಿಕ ಸಮುದಾಯದ ಮಹಿಳೆಯೊಬ್ಬರ ಬಗ್ಗೆ. ಎಷ್ಟು ಕ್ರೂರವಾಗಿ ಅವರು ಆಕೆಯ ಬಗ್ಗೆ ಮಾತನಾಡುತ್ತಿದ್ದರೆಂದರೆ ಅವಳು ಕೂಡ ಮನುಷ್ಯಳು, ಅವಳಿಗೂ ಕೂಡ ಮಾನವ ಹಕ್ಕಿದೆ, ಆಕೆಗೂ ಕೂಡ ಗೌರವ ಕೊಡಬೇಕು, ಊಹ್ಞೂಂ, ಇಂತಹ ಸಣ್ಣ ಮನೋಭಾವವೂ ಅವರಲ್ಲಿರಲಿಲ್ಲ. ಜಾತಿ ವ್ಯವಸ್ಥೆಯ ಭೀಕರ ಚಿತ್ರಣ ಅಲ್ಲಿ ಎದ್ದು  ಕಾಣುತ್ತಿತ್ತು.  ಈ ದಿಸೆಯಲ್ಲಿ ಉಕ್ಕಿಬರುವ ಪ್ರಶ್ನೆಗಳೇನೆಂದರೆ ಶೌಚಾಲಯ ಶುಚಿಗೊಳಿಸುವುದನ್ನು ಪೌರಕಾರ್ಮಿಕ ಸಮುದಾಯವೇ ಏಕೆ ಮಾಡಬೇಕು? ಆ ಕಾಯಕವನ್ನು ಎಲ್ಲಾ ಜಾತಿಯವರು ಏಕೆ ಮಾಡಬಾರದು? ಯಾಕೆಂದರೆ ಉದಾಹರಣೆಗೆ ವ್ಯಕ್ತಿಗಳು ಅವರು ಶೌಚ ಮಾಡಿದ ನಂತರ ಅವರದ್ದನ್ನು ಅವರೇ ತೊಳೆದುಕೊಳ್ಳುತ್ತಾರಲ್ಲವೇ? ಅದಕ್ಕೂ ಒಬ್ಬ ಆಳನ್ನು "ಇಲ್ಲ, ಇದನ್ನು ನಾನು ಮುಟ್ಟುವುದಿಲ್ಲ. ಇದು ಗಲೀಜು"ಎಂದು ನೇಮಿಸಿಕೊಳ್ಳುತ್ತಾರೆಯೇ? ಇಲ್ಲ. ಹೀಗಿರುವಾಗ ಅವರದ್ದನ್ನು ಅವರು ತೊಳೆದುಕೊಳ್ಳುವಾಗ ಶೌಚಾಲಯ ಶುಚಿಗೊಳಿಸಲು ನಿರ್ದಿಷ್ಟ ಸಮುದಾಯದವರನ್ನು ಯ...