Skip to main content

ಬಾಬಾಸಾಹೇಬ್ ಅಂಬೇಡ್ಕರ್ ನುಡಿಮುತ್ತುಗಳು

ಅಸ್ಪೃಶ್ಯ ಆತ ಎಷ್ಟೇ ಬೆಳೆದರೂ...

"ಒಂದು ಬಗೆಯ ತಾರತಮ್ಯವಿದೆ ಅದು ತುಂಬ ಸೂಕ್ಷ್ಮ, ಆದಾಗ್ಯೂ ಅದು ವಾಸ್ತವ. ಆ ತಾರತಮ್ಯದಲ್ಲಿ ಪ್ರತಿಭಾವಂತ, ಅರ್ಹ ಅಸ್ಪೃಶ್ಯನ ಸ್ಥಾನ ಮತ್ತು ಘನತೆಯನ್ನು ಕುಗ್ಗಿಸುವ ವ್ಯವಸ್ಥಿತ ತಂತ್ರವಿರುತ್ತದೆ. ಉದಾಹರಣೆಗೆ ಒಬ್ಬ ಹಿಂದೂ ನೇತಾರನನ್ನು ಭಾರತದ ಶ್ರೇಷ್ಠ ನೇತಾರ ಎನ್ನಲಾಗುತ್ತದೆ ಆದರೆ ಯಾರೂ ಕೂಡ ಆತನನ್ನು ಕಾಶ್ಮೀರಿ ಬ್ರಾಹ್ಮಣರ ನೇತಾರ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಅಕಸ್ಮಾತ್ ಆ ನೇತಾರ ಅಸ್ಪೃಶ್ಯ ಸಮುದಾಯದವನಾಗಿದ್ದರೆ ಆತನನ್ನು ಅಸ್ಪೃಶ್ಯರ ನೇತಾರ ಎಂದಷ್ಟೇ ಹೇಳಲಾಗುತ್ತದೆಯೇ ಹೊರತು  ಆತನನ್ನು ಭಾರತದ ನೇತಾರ ಎನ್ನಲಾಗುವುದಿಲ್ಲ! ಹಾಗೆಯೇ ಒಬ್ಬ ಹಿಂದೂ ವೈದ್ಯನನ್ನು ಭಾರತದ ಶ್ರೇಷ್ಠ ವೈದ್ಯ ಎನ್ನಲಾಗುತ್ತದೆ, ಯಾರೂ ಕೂಡ ಆತನನ್ನು ಅಯ್ಯಂಗಾರ್ (ಆತ ಅದೇ ಆಗಿದ್ದರೂ ಕೂಡ) ಎನ್ನುವುದಿಲ್ಲ. ಆದರೆ ಅದೇ ವೈದ್ಯ ಅಕಸ್ಮಾತ್ ಅಸ್ಪೃಶ್ಯ ನಾಗಿದ್ದರೆ ಆತನನ್ನು ಹಾಗೆಯೇ ಕರೆಯಲಾಗುತ್ತದೆ, ಅಸ್ಪೃಶ್ಯ ವೈದ್ಯ ಎಂದೇ ಸಂಬೋಧಿಸಲಾಗುತ್ತದೆ. ಅಂತೆಯೇ ಒಬ್ಬ ಹಿಂದೂ ಹಾಡುಗಾರನನ್ನು ಭಾರತದ ಶ್ರೇಷ್ಠ ಹಾಡುಗಾರ ಎಂದು ವರ್ಣಿಸಲಾಗುತ್ತದೆ ಮತ್ತು ಅದೇ ಹಾಡುಗಾರ ಅಸ್ಪೃಶ್ಯನಾಗಿದ್ದರೆ ಆತನನ್ನು ಅಸ್ಪೃಶ್ಯ ಹಾಡುಗಾರ ಅಷ್ಟೇ ಎಂದು ಕರೆಯಲಾಗುತ್ತದೆ. ಹಾಗೆಯೇ ಒಬ್ಬ ಹಿಂದೂ ಕುಸ್ತಿ ಪಟುವನ್ನೂ ಅಷ್ಟೆ ಭಾರತದ ಶ್ರೇಷ್ಠ ಜಿಮ್ನಾಸ್ಟ್ ಎನ್ನಲಾಗುತ್ತದೆ ಅಕಸ್ಮಾತ್ ಆತ ಅಸ್ಪೃಶ್ಯ ನಾಗಿದ್ದರೆ ಆತನನ್ನು ಅಸ್ಪೃಶ್ಯ ಜಿಮ್ನಾಸ್ಟ್ ಎಂದೇ ಕರೆಯಲಾಗುತ್ತದೆ".

  "ಈ ನಿಟ್ಟಿನಲ್ಲಿ ಮೇಲೆ ಹೇಳಿದ ಈ ಮಾದರಿಯ ತಾರತಮ್ಯದ ಮೂಲ ಇರುವುದು ಅಸ್ಪೃಶ್ಯರು ಅದೆಷ್ಟೇ ಶ್ರೇಷ್ಠತೆಯನ್ನು ಸಾಧಿಸಲಿ ಅವರು ಕೀಳು ಜನರು ಎನ್ನುವ ಹಿಂದೂಗಳ ದೃಷ್ಟಿಕೋನದಲ್ಲಿ. ಈ ದಿಸೆಯಲ್ಲಿ ಅಸ್ಪೃಶ್ಯ ಸಮುದಾಯದ ಶ್ರೇಷ್ಠ ವ್ಯಕ್ತಿಗಳು ಅವರು ಅಸ್ಪೃಶ್ಯ ಸಮುದಾಯದಲ್ಲಷ್ಟೆ ಶ್ರೇಷ್ಠರು ಅವರು ಹಿಂದೂ ಶ್ರೇಷ್ಠ ವ್ಯಕ್ತಿಗಳಿಗಿಂತ ಶ್ರೇಷ್ಠರಾಗುವುದಿರಲಿ ಅವರ ಸಮಕ್ಕೂ ಕೂಡ ಏರಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈ ಬಗೆಯ ತಾರತಮ್ಯ ಗುಣಲಕ್ಷಣದಲ್ಲಿ ಸಾಮಾಜಿಕತೆಯದಾಗಿದ್ದರೂ  ಅದು ಆರ್ಥಿಕ ತಾರತಮ್ಯದ ಅಪಮಾನವಲ್ಲದೆ ಬೇರೇನಲ್ಲ."

--ಬಾಬಾಸಾಹೇಬ್ ಅಂಬೇಡ್ಕರ್. (AW&S, vol.5, Pp.109) 

ಕನ್ನಡಕ್ಕೆ:  ರಘೋತ್ತಮ ಹೊಬ (೨೯-೮-೧೬)

Comments

Popular posts from this blog

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು

  ಹಿಂದೂ ಮತ್ತು ಅಸ್ಪೃಶ್ಯನೊಬ್ಬ ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಭೇಟಿಯಾದಾಗ... "ಯಾವಾಗಲಾದರೊಮ್ಮೆ ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಜಾತಿ ತಿಳಿಯದಿದ್ದಾಗ ಜಾತಿವಾದಿ ಹಿಂದೂಗಳು ಮತ್ತು ಅಸ್ಪೃಶ್ಯರು ತುಂಬಾ ಆಪ್ತ ಸ್ನೇಹಿತರಂತೆ ವರ್ತಿಸುತ್ತಾರೆ. ಪರಸ್ಪರ ಬೀಡಿ, ಸಿಗರೆಟ್, ಹಣ್ಣುಗಳು, ಎಲೆ- ಅಡಿಕೆ ಹೀಗೆ ಅವರು ಹಂಚಿಕೊಳ್ಳುತ್ತಾರೆ. ಆದರೆ ಇದ್ದಕ್ಕಿದ್ದಂತೆ ಆ ಹಿಂದೂ ವ್ಯಕ್ತಿಗೆ ತಾನು ಇಷ್ಟು ಹೊತ್ತು ಮಾತನಾಡುತ್ತಿದ್ದ ವ್ಯಕ್ತಿ ಅಸ್ಪೃಶ್ಯ ಎಂದು ತಿಳಿಯುತ್ತಿದ್ದಂತೆ ಆತನ ಮನಸ್ಸಿನಲ್ಲಿ ದ್ವೇಷದ ಮನೋಭಾವ ಮೊಳಕೆಯೊಡೆಯುತ್ತದೆ, ತಾನು ಮೋಸಗೊಳಗಾದೆನೆಲ್ಲ ಎಂದು ಆತ ಯೋಚಿಸಲು ಆರಂಭಿಸುತ್ತಾನೆ. ಆತ ಕೋಪಗೊಳ್ಳುತ್ತಾನೆ. ಅಂತಿಮವಾಗಿ ತಾತ್ಕಾಲಿಕ ಆ ಸ್ನೇಹ ಜಗಳ ಮತ್ತು ಬೈಗುಳದ ಮೂಲಕ ಅಂತ್ಯಗೊಳ್ಳುತ್ತದೆ". -ಡಾ.ಬಿ.ಆರ್.ಅಂಬೇಡ್ಕರ್ ( Ambedkar writings and speeches, Vol.17, Part 3, Pp.132) ಕನ್ನಡಕ್ಕೆ: ರಘೋತ್ತಮ ಹೊಬ)

ಮುಂದೊಂದು ದಿನ ಎಲ್ಲರೂ ಬೌದ್ಧರಾಗಲಿದ್ದಾರೆ -ಡಾ.ಅಂಬೇಡ್ಕರ್

  "ಪ್ರತಿಯೊಂದು ಧರ್ಮವು ಉತ್ತರಿಸಬೇಕಾದ ಒಂದು ಪ್ರಶ್ನೆ ಇದೆ. ಅದೆಂದರೆ ತಳ ಸಮುದಾಯ ಮತ್ತು ದೌರ್ಜನ್ಯ ಪೀಡಿತ ಸಮುದಾಯಗಳಿಗೆ ಧರ್ಮವೊಂದು ನೀಡಬಹುದಾದ ನೈತಿಕ ಮತ್ತು ಬೌದ್ಧಿಕ ಬೆಂಬಲವಾದರು ಏನು ಎಂಬುದು? ಧರ್ಮವೊಂದು ಅಂತಹದ್ದೊಂದು ಬೆಂಬಲ ನೀಡಲಿಲ್ಲ ಎಂದರೆ ಅದು ದುರದೃಷ್ಟಕರ ಪರಿಸ್ಥಿತಿಯಲ್ಲಿ ಇದೆ ಎಂದೆ ಅರ್ಥ. ಆದ್ದರಿಂದ  ಹಿಂದೂ ಧರ್ಮವು  ಕೋಟ್ಯಾಂತರ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೈತಿಕ ಮತ್ತು ಬೌದ್ಧಿಕ ಬೆಂಬಲ ನೀಡುತ್ತದೆಯೇ? ಖಂಡಿತ ಇಲ್ಲ. ಈ ನಿಟ್ಟಿನಲ್ಲಿ ತಮಗೆ ಬೌದ್ಧಿಕ ಮತ್ತು ನೈತಿಕ ಬೆಂಬಲ ನೀಡದ ಹಿಂದೂ ಧರ್ಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರು ಇರಲು ಬಯಸುತ್ತಾರೆ ಎಂದು ಹಿಂದೂಗಳು ಅಪೇಕ್ಷೆ ಪಡಲು ಸಾಧ್ಯವೇ? ಅಂದಹಾಗೆ ಅಂತಹದ್ದೊಂದು ಅಪೇಕ್ಷೆ ಅಕ್ಷರಶಃ ವ್ಯರ್ಥದ್ದು.  "ಯಾಕೆಂದರೆ ಹಿಂದೂ ಧರ್ಮ ಅದು ಜ್ವಾಲಾಮುಖಿಯ ಮೇಲೆ ತೇಲುತ್ತಿದೆ. ಆ ನಿಟ್ಟಿನಲ್ಲಿ ಇಂದು ಅದು(ಜ್ವಾಲಾಮುಖಿ) ನಂದಿದ ಹಾಗೆ ಕಾಣುತ್ತಿದೆ. ಆದರೆ ವಾಸ್ತವ ಅದಲ್ಲ‌‌. ಮೊಂದೊಂದು ದಿನ ಈ ಕೋಟ್ಯಂತರ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ) ಮಂದಿಗೆ ತಮ್ಮ ಈ ಹೀನ ಸ್ಥಿತಿಯ ಬಗ್ಗೆ ಅರಿವಾದಾಗ ಮತ್ತು ಅದಕ್ಕೆ ಹಿಂದೂ ಧರ್ಮದ ಸಾಮಾಜಿಕ ತತ್ವ ಕಾರಣ ಎಂದು ತಿಳಿದಾಗ ಆ ಜ್ವಾಲಾಮುಖಿ ಜೀವಂತಗೊಳ್ಳಲಿದೆ. ಇದಕ್ಕೆ ಸಾಕ್ಷಿಯಾಗಿ ರೋಮನ್ ಸಾಮ್ರಾಜ್ಯದಲ್ಲಿ ಕ್ರಿಶ್ಚಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್: ಮರೆಯಬಾರದ ಮೈಸೂರು ದೊರೆ

  ನಾಲ್ವಡಿ ಕೃಷ್ಣರಾಜ ಒಡೆಯರ್ -ರಘೋತ್ತಮ ಹೊಬ "ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು" ಇದು ಬಾಬಾಸಾಹೇಬ್ ಡಾ.ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಅದರ ಭವ್ಯ ಇತಿಹಾಸ. ಇಂತಹ ಭವ್ಯ ಇತಿಹಾಸದ ನಿರ್ಮಾತೃವಾಗಿ ತನ್ಮೂಲಕ ಮಾದರಿ ಮೈಸೂರಿಗೆ ಮುನ್ನುಡಿ ಬರೆದ ಧೃವತಾರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್. ಆಳರಸರಿಗೆ ಮಾದರಿಯಾದ ರಾಜಯೋಗಿ.  ನಾಲ್ವಡಿಯವರು ಜನಿಸಿದ್ದು 1884 ರ ಜೂನ್ 4ರಂದು. ತಂದೆ ಶ್ರೀ ಚಾಮರಾಜ ಒಡೆಯರ್, ತಾಯಿ ಕೆಂಪನಂಜಮ್ಮಣ್ಣಿ (ವಾಣಿ ವಿಲಾಸ ಸನ್ನಿಧಾನ). ಬಾಲಕ ಕೃಷ್ಣರಾಜರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಮೈಸೂರಿನಲ್ಲೇ. ರಾಯಲ್ ಸ್ಕೂಲ್ ಎಂಬ ಪ್ರತ್ಯೇಕ ಶಾಲೆಯಲ್ಲಿ ಇವರ ಸಹಪಾಠಿಗಳಾಗಿದ್ದವರು ಮಿರ್ಜಾ  ಇಸ್ಮಾಯಿಲ್, ಲಕ್ಷ್ಮೀಕಾಂತರಾಜ್ ಅರಸ್, ಮುಂತಾದವರು. 1894 ರಲ್ಲಿ ತಂದೆ ಚಾಮರಾಜ ಒಡೆಯರ್ ರವರ ನಿಧನದಿಂದಾಗಿ ಬಾಲಕ ಕೃಷ್ಣರಾಜನಿಗೆ ರಾಜ್ಯದ ಹೊಣೆ ಬಿದ್ದಾಗ ಅವರಿಗೆ ಕೇವಲ 10 ವರ್ಷ. ಪೆಬ್ರವರಿ 1, 1895 ರಲ್ಲಿ ಯುವರಾಜ ಕೃಷ್ಣರಾಜರಿಗೆ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಬ್ರಿಟಿಷ್ ರಿಜೆನ್ಸಿ ಆಳ್ವಿಕೆಯಲ್ಲಿ ಮೈಸೂರಿನ ಗೌರ್ನರ್ ಮತ್ತು ಮಹಾರಾಜರ ಟ್ಯೂಟರ...