Skip to main content

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ






"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ.

"ಹೊಲಯರು - ಮಾದರು -ರಾಜರು"
ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನಮ್ಮನ್ನು ಚಾಲುಕ್ಯರು ಎಂದು ಕರೆಯುತ್ತಿದ್ದರು" ಎಂದು ಅಲ್ಲಿಯ ಜನರು ಈಗಲೂ ಹೇಳುವುದನ್ನು ಲೇಖಕರು ಉಲ್ಲೇಖಿಸುತ್ತಾರೆ. 

ಇನ್ನು ಹಂಪಿ ಕನ್ನಡ ವಿವಿಯ ಸಂಶೋಧನೆಗಳ ಆಧಾರದಲ್ಲಿ ಲೇಖಕರು ಚಾಳುಕ್ಯರ ಸುಪ್ರಸಿದ್ಧ ದೊರೆ ಪುಲಕೇಶಿಯನ್ನು ಪ್ರಸ್ತಾಫಿಸುತ್ತ ಪುಲಕೇಶಿಯ ಮೂಲ ಪೊಲೆಕೇಶಿ, ಪೊಲೆ ಎಂಬುದು ಹೊಲೆಮನೆ ಮತ್ತು ಕೇಶಿ ಎಂಬುದು ಕೇಶವ ಎಂಬುದರ ಮೂಲವಾಗಿದೆ. ಆದ್ದರಿಂದ ಹೊಲೆಯರ ಕೇಶವನೆ ಪೊಲೆಕೇಶಿ ಅಥವಾ ಪುಲಕೇಶಿ. ಆತ ಛಲವಾದಿ ವಂಶಸ್ಥರಾದ ಚಾಲುಕ್ಯರ ದೊರೆ ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕಾಗಿ ಅವರು ಕ್ರಿ.ಶ.578 ರ ಬಾದಾಮಿ ಶಾಸನ, ಕ್ರಿ.ಶ‌.602 ರ ಮಹಾಕೂಟ ಸ್ತಂಭ ಶಾಸನ, ಕ್ರಿ. ಶ. 634 ರ ಐಹೊಳೆಯ ಶಾಸನಗಳನ್ನು ಉಲ್ಲೇಖಿಸುತ್ತಾರೆ. ಮುಖ್ಯವಾಗಿ ಭಾಷಾಶಾಸ್ತ್ರದ ದಾಖಲೆ ನೀಡುವ ಅವರು ಸುಮೇರಿಯನ್ ಮತ್ತು ಅಕ್ಕಾಡಿಯನ್ ಭಾಷೆಗಳಲ್ಲಿ ರಾಜ ಮತ್ತು ರಾಜನಿಗೆ ಸಂಬಂಧಿಸಿದ ಪದ ವ್ಯುತ್ಪತ್ತಿ ದಾಖಲಿಸಿ ಚಾಲುಕ್ಯ ಪದ ಅಲ್ಲಿಂದ ಬಂದಿದೆ ಎನ್ನುತ್ತಾರೆ.

ಅಂದಹಾಗೆ ಪುಲಕೇಶಿನ್ ಅಂದರೆ ಪೊಲಕೇಸಿನ್ ಅಂದರೆ ಹೊಲ ಮಾಡುವವನು, ಭೂಮಿ ಉಳುವವನು ಎಂದು ಅವರು ಹೇಳುತ್ತಾ, ಹೊಲ ಎಂಬ ಪದದಿಂದ ಹೊಲೆಯರು (Owner of Land) ಬಂದಿರುವುದರಿಂದ ಹೊಲೆಯರು ಈ ರಾಜ್ಯ ಆಳಿದವರು ಅದಕ್ಕಾಗಿ ಅವರು ರಾಜರು ಎಂದು ಹೇಳುತ್ತಾರೆ. ಹಾಗೆಯೇ ಹೊಲೆಯರು ಹೊಲದ ಮೂಲದವರಾದ್ದರಿಂದ ಚಾಲುಕ್ಯರು ಅಥವಾ ಚಾಳುಕ್ಯರು "ಚಳುಕ್ಯ, ಚಳುಕಿ, ಸಳುಕಿ", ಇವುಗಳನ್ನು ಸಲಿಕೆ, ಸಲಾಕೆ ಎಂಬ ಕೃಷಿ ಉಪಕರಣಗಳೊಡನೆ ಸಮೀಕರಿಸಬಹುದು. ಆದ್ದರಿಂದ ಚಾಳುಕ್ಯರು ಹೊಲೆಯ ಜನಾಂಗದವರು ಅವರ ರಾಜ ಪುಲಕೇಶಿ (ಹೊಲೆಯರ ಕೇಶಿ) ಹೊಲೆಯರವನು ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕೆ ಪೂರಕವಾಗಿ ನಾವು ಬಾಬಾಸಾಹೇಬ್ ಅಂಬೇಡ್ಕರರ "ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು" ಎಂಬ ಮಾತನ್ನು ಇಲ್ಲಿ ಉಲ್ಲೇಖಿಸಬಹುದು.
***
#ಪುಲಿಕೇಶಿ

Comments

  1. ನಿಜವಾದ ಇತಿಹಾಸ ಇನ್ನೂ ಅಗಿಯಬೇಕು. ಆಗ ನಿಜ ಸತ್ಯ ಹೊರಗೆ ಬರುತ್ತದೆ. ಮೊದಲ ಧರೆಗೆ ದೊಡ್ಡವರು ಪುಸ್ತಕ ದಲ್ಲಿ ಪ್ರಕಟಗೊಂಡಿತು, ಲೇಖಕರು ಐಪಿಎಸ್ ಭರಣಿ ಸರದು.ನಂತರ ನಂಜುಂಡ ಸ್ವಾಮಿ ಐಪಿಎಸ ಇವರದು. ಅಭಿನಂದನೆಗಳು ಸರ ಇನ್ನೂ ಹೆಚ್ಚಿನ ಇತಿಹಾಸ ಹೊರಗೆ ಬರಬೇಕು ತನ್ನಿ ಸರ ಭಗವಾನ್ ಬುದ್ಧ ಮತ್ತು ಸಾಹೇಬ್ ಅಂಬೇಡ್ಕರ ಅವರ ಕಂಡ ಕನಸು ನನಸಾಗುತ್ತದೆ.

    ReplyDelete
  2. Truth is always truth....tq sir great job

    ReplyDelete

Post a Comment

Popular posts from this blog

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು

  ಹಿಂದೂ ಮತ್ತು ಅಸ್ಪೃಶ್ಯನೊಬ್ಬ ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಭೇಟಿಯಾದಾಗ... "ಯಾವಾಗಲಾದರೊಮ್ಮೆ ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಜಾತಿ ತಿಳಿಯದಿದ್ದಾಗ ಜಾತಿವಾದಿ ಹಿಂದೂಗಳು ಮತ್ತು ಅಸ್ಪೃಶ್ಯರು ತುಂಬಾ ಆಪ್ತ ಸ್ನೇಹಿತರಂತೆ ವರ್ತಿಸುತ್ತಾರೆ. ಪರಸ್ಪರ ಬೀಡಿ, ಸಿಗರೆಟ್, ಹಣ್ಣುಗಳು, ಎಲೆ- ಅಡಿಕೆ ಹೀಗೆ ಅವರು ಹಂಚಿಕೊಳ್ಳುತ್ತಾರೆ. ಆದರೆ ಇದ್ದಕ್ಕಿದ್ದಂತೆ ಆ ಹಿಂದೂ ವ್ಯಕ್ತಿಗೆ ತಾನು ಇಷ್ಟು ಹೊತ್ತು ಮಾತನಾಡುತ್ತಿದ್ದ ವ್ಯಕ್ತಿ ಅಸ್ಪೃಶ್ಯ ಎಂದು ತಿಳಿಯುತ್ತಿದ್ದಂತೆ ಆತನ ಮನಸ್ಸಿನಲ್ಲಿ ದ್ವೇಷದ ಮನೋಭಾವ ಮೊಳಕೆಯೊಡೆಯುತ್ತದೆ, ತಾನು ಮೋಸಗೊಳಗಾದೆನೆಲ್ಲ ಎಂದು ಆತ ಯೋಚಿಸಲು ಆರಂಭಿಸುತ್ತಾನೆ. ಆತ ಕೋಪಗೊಳ್ಳುತ್ತಾನೆ. ಅಂತಿಮವಾಗಿ ತಾತ್ಕಾಲಿಕ ಆ ಸ್ನೇಹ ಜಗಳ ಮತ್ತು ಬೈಗುಳದ ಮೂಲಕ ಅಂತ್ಯಗೊಳ್ಳುತ್ತದೆ". -ಡಾ.ಬಿ.ಆರ್.ಅಂಬೇಡ್ಕರ್ ( Ambedkar writings and speeches, Vol.17, Part 3, Pp.132) ಕನ್ನಡಕ್ಕೆ: ರಘೋತ್ತಮ ಹೊಬ)

ಮುಂದೊಂದು ದಿನ ಎಲ್ಲರೂ ಬೌದ್ಧರಾಗಲಿದ್ದಾರೆ -ಡಾ.ಅಂಬೇಡ್ಕರ್

  "ಪ್ರತಿಯೊಂದು ಧರ್ಮವು ಉತ್ತರಿಸಬೇಕಾದ ಒಂದು ಪ್ರಶ್ನೆ ಇದೆ. ಅದೆಂದರೆ ತಳ ಸಮುದಾಯ ಮತ್ತು ದೌರ್ಜನ್ಯ ಪೀಡಿತ ಸಮುದಾಯಗಳಿಗೆ ಧರ್ಮವೊಂದು ನೀಡಬಹುದಾದ ನೈತಿಕ ಮತ್ತು ಬೌದ್ಧಿಕ ಬೆಂಬಲವಾದರು ಏನು ಎಂಬುದು? ಧರ್ಮವೊಂದು ಅಂತಹದ್ದೊಂದು ಬೆಂಬಲ ನೀಡಲಿಲ್ಲ ಎಂದರೆ ಅದು ದುರದೃಷ್ಟಕರ ಪರಿಸ್ಥಿತಿಯಲ್ಲಿ ಇದೆ ಎಂದೆ ಅರ್ಥ. ಆದ್ದರಿಂದ  ಹಿಂದೂ ಧರ್ಮವು  ಕೋಟ್ಯಾಂತರ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೈತಿಕ ಮತ್ತು ಬೌದ್ಧಿಕ ಬೆಂಬಲ ನೀಡುತ್ತದೆಯೇ? ಖಂಡಿತ ಇಲ್ಲ. ಈ ನಿಟ್ಟಿನಲ್ಲಿ ತಮಗೆ ಬೌದ್ಧಿಕ ಮತ್ತು ನೈತಿಕ ಬೆಂಬಲ ನೀಡದ ಹಿಂದೂ ಧರ್ಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರು ಇರಲು ಬಯಸುತ್ತಾರೆ ಎಂದು ಹಿಂದೂಗಳು ಅಪೇಕ್ಷೆ ಪಡಲು ಸಾಧ್ಯವೇ? ಅಂದಹಾಗೆ ಅಂತಹದ್ದೊಂದು ಅಪೇಕ್ಷೆ ಅಕ್ಷರಶಃ ವ್ಯರ್ಥದ್ದು.  "ಯಾಕೆಂದರೆ ಹಿಂದೂ ಧರ್ಮ ಅದು ಜ್ವಾಲಾಮುಖಿಯ ಮೇಲೆ ತೇಲುತ್ತಿದೆ. ಆ ನಿಟ್ಟಿನಲ್ಲಿ ಇಂದು ಅದು(ಜ್ವಾಲಾಮುಖಿ) ನಂದಿದ ಹಾಗೆ ಕಾಣುತ್ತಿದೆ. ಆದರೆ ವಾಸ್ತವ ಅದಲ್ಲ‌‌. ಮೊಂದೊಂದು ದಿನ ಈ ಕೋಟ್ಯಂತರ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ) ಮಂದಿಗೆ ತಮ್ಮ ಈ ಹೀನ ಸ್ಥಿತಿಯ ಬಗ್ಗೆ ಅರಿವಾದಾಗ ಮತ್ತು ಅದಕ್ಕೆ ಹಿಂದೂ ಧರ್ಮದ ಸಾಮಾಜಿಕ ತತ್ವ ಕಾರಣ ಎಂದು ತಿಳಿದಾಗ ಆ ಜ್ವಾಲಾಮುಖಿ ಜೀವಂತಗೊಳ್ಳಲಿದೆ. ಇದಕ್ಕೆ ಸಾಕ್ಷಿಯಾಗಿ ರೋಮನ್ ಸಾಮ್ರಾಜ್ಯದಲ್ಲಿ ಕ್ರಿಶ್ಚಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್: ಮರೆಯಬಾರದ ಮೈಸೂರು ದೊರೆ

  ನಾಲ್ವಡಿ ಕೃಷ್ಣರಾಜ ಒಡೆಯರ್ -ರಘೋತ್ತಮ ಹೊಬ "ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು" ಇದು ಬಾಬಾಸಾಹೇಬ್ ಡಾ.ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಅದರ ಭವ್ಯ ಇತಿಹಾಸ. ಇಂತಹ ಭವ್ಯ ಇತಿಹಾಸದ ನಿರ್ಮಾತೃವಾಗಿ ತನ್ಮೂಲಕ ಮಾದರಿ ಮೈಸೂರಿಗೆ ಮುನ್ನುಡಿ ಬರೆದ ಧೃವತಾರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್. ಆಳರಸರಿಗೆ ಮಾದರಿಯಾದ ರಾಜಯೋಗಿ.  ನಾಲ್ವಡಿಯವರು ಜನಿಸಿದ್ದು 1884 ರ ಜೂನ್ 4ರಂದು. ತಂದೆ ಶ್ರೀ ಚಾಮರಾಜ ಒಡೆಯರ್, ತಾಯಿ ಕೆಂಪನಂಜಮ್ಮಣ್ಣಿ (ವಾಣಿ ವಿಲಾಸ ಸನ್ನಿಧಾನ). ಬಾಲಕ ಕೃಷ್ಣರಾಜರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಮೈಸೂರಿನಲ್ಲೇ. ರಾಯಲ್ ಸ್ಕೂಲ್ ಎಂಬ ಪ್ರತ್ಯೇಕ ಶಾಲೆಯಲ್ಲಿ ಇವರ ಸಹಪಾಠಿಗಳಾಗಿದ್ದವರು ಮಿರ್ಜಾ  ಇಸ್ಮಾಯಿಲ್, ಲಕ್ಷ್ಮೀಕಾಂತರಾಜ್ ಅರಸ್, ಮುಂತಾದವರು. 1894 ರಲ್ಲಿ ತಂದೆ ಚಾಮರಾಜ ಒಡೆಯರ್ ರವರ ನಿಧನದಿಂದಾಗಿ ಬಾಲಕ ಕೃಷ್ಣರಾಜನಿಗೆ ರಾಜ್ಯದ ಹೊಣೆ ಬಿದ್ದಾಗ ಅವರಿಗೆ ಕೇವಲ 10 ವರ್ಷ. ಪೆಬ್ರವರಿ 1, 1895 ರಲ್ಲಿ ಯುವರಾಜ ಕೃಷ್ಣರಾಜರಿಗೆ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಬ್ರಿಟಿಷ್ ರಿಜೆನ್ಸಿ ಆಳ್ವಿಕೆಯಲ್ಲಿ ಮೈಸೂರಿನ ಗೌರ್ನರ್ ಮತ್ತು ಮಹಾರಾಜರ ಟ್ಯೂಟರ...