Skip to main content

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ






"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ.

"ಹೊಲಯರು - ಮಾದರು -ರಾಜರು"
ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನಮ್ಮನ್ನು ಚಾಲುಕ್ಯರು ಎಂದು ಕರೆಯುತ್ತಿದ್ದರು" ಎಂದು ಅಲ್ಲಿಯ ಜನರು ಈಗಲೂ ಹೇಳುವುದನ್ನು ಲೇಖಕರು ಉಲ್ಲೇಖಿಸುತ್ತಾರೆ. 

ಇನ್ನು ಹಂಪಿ ಕನ್ನಡ ವಿವಿಯ ಸಂಶೋಧನೆಗಳ ಆಧಾರದಲ್ಲಿ ಲೇಖಕರು ಚಾಳುಕ್ಯರ ಸುಪ್ರಸಿದ್ಧ ದೊರೆ ಪುಲಕೇಶಿಯನ್ನು ಪ್ರಸ್ತಾಫಿಸುತ್ತ ಪುಲಕೇಶಿಯ ಮೂಲ ಪೊಲೆಕೇಶಿ, ಪೊಲೆ ಎಂಬುದು ಹೊಲೆಮನೆ ಮತ್ತು ಕೇಶಿ ಎಂಬುದು ಕೇಶವ ಎಂಬುದರ ಮೂಲವಾಗಿದೆ. ಆದ್ದರಿಂದ ಹೊಲೆಯರ ಕೇಶವನೆ ಪೊಲೆಕೇಶಿ ಅಥವಾ ಪುಲಕೇಶಿ. ಆತ ಛಲವಾದಿ ವಂಶಸ್ಥರಾದ ಚಾಲುಕ್ಯರ ದೊರೆ ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕಾಗಿ ಅವರು ಕ್ರಿ.ಶ.578 ರ ಬಾದಾಮಿ ಶಾಸನ, ಕ್ರಿ.ಶ‌.602 ರ ಮಹಾಕೂಟ ಸ್ತಂಭ ಶಾಸನ, ಕ್ರಿ. ಶ. 634 ರ ಐಹೊಳೆಯ ಶಾಸನಗಳನ್ನು ಉಲ್ಲೇಖಿಸುತ್ತಾರೆ. ಮುಖ್ಯವಾಗಿ ಭಾಷಾಶಾಸ್ತ್ರದ ದಾಖಲೆ ನೀಡುವ ಅವರು ಸುಮೇರಿಯನ್ ಮತ್ತು ಅಕ್ಕಾಡಿಯನ್ ಭಾಷೆಗಳಲ್ಲಿ ರಾಜ ಮತ್ತು ರಾಜನಿಗೆ ಸಂಬಂಧಿಸಿದ ಪದ ವ್ಯುತ್ಪತ್ತಿ ದಾಖಲಿಸಿ ಚಾಲುಕ್ಯ ಪದ ಅಲ್ಲಿಂದ ಬಂದಿದೆ ಎನ್ನುತ್ತಾರೆ.

ಅಂದಹಾಗೆ ಪುಲಕೇಶಿನ್ ಅಂದರೆ ಪೊಲಕೇಸಿನ್ ಅಂದರೆ ಹೊಲ ಮಾಡುವವನು, ಭೂಮಿ ಉಳುವವನು ಎಂದು ಅವರು ಹೇಳುತ್ತಾ, ಹೊಲ ಎಂಬ ಪದದಿಂದ ಹೊಲೆಯರು (Owner of Land) ಬಂದಿರುವುದರಿಂದ ಹೊಲೆಯರು ಈ ರಾಜ್ಯ ಆಳಿದವರು ಅದಕ್ಕಾಗಿ ಅವರು ರಾಜರು ಎಂದು ಹೇಳುತ್ತಾರೆ. ಹಾಗೆಯೇ ಹೊಲೆಯರು ಹೊಲದ ಮೂಲದವರಾದ್ದರಿಂದ ಚಾಲುಕ್ಯರು ಅಥವಾ ಚಾಳುಕ್ಯರು "ಚಳುಕ್ಯ, ಚಳುಕಿ, ಸಳುಕಿ", ಇವುಗಳನ್ನು ಸಲಿಕೆ, ಸಲಾಕೆ ಎಂಬ ಕೃಷಿ ಉಪಕರಣಗಳೊಡನೆ ಸಮೀಕರಿಸಬಹುದು. ಆದ್ದರಿಂದ ಚಾಳುಕ್ಯರು ಹೊಲೆಯ ಜನಾಂಗದವರು ಅವರ ರಾಜ ಪುಲಕೇಶಿ (ಹೊಲೆಯರ ಕೇಶಿ) ಹೊಲೆಯರವನು ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕೆ ಪೂರಕವಾಗಿ ನಾವು ಬಾಬಾಸಾಹೇಬ್ ಅಂಬೇಡ್ಕರರ "ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು" ಎಂಬ ಮಾತನ್ನು ಇಲ್ಲಿ ಉಲ್ಲೇಖಿಸಬಹುದು.
***
#ಪುಲಿಕೇಶಿ

Comments

  1. ನಿಜವಾದ ಇತಿಹಾಸ ಇನ್ನೂ ಅಗಿಯಬೇಕು. ಆಗ ನಿಜ ಸತ್ಯ ಹೊರಗೆ ಬರುತ್ತದೆ. ಮೊದಲ ಧರೆಗೆ ದೊಡ್ಡವರು ಪುಸ್ತಕ ದಲ್ಲಿ ಪ್ರಕಟಗೊಂಡಿತು, ಲೇಖಕರು ಐಪಿಎಸ್ ಭರಣಿ ಸರದು.ನಂತರ ನಂಜುಂಡ ಸ್ವಾಮಿ ಐಪಿಎಸ ಇವರದು. ಅಭಿನಂದನೆಗಳು ಸರ ಇನ್ನೂ ಹೆಚ್ಚಿನ ಇತಿಹಾಸ ಹೊರಗೆ ಬರಬೇಕು ತನ್ನಿ ಸರ ಭಗವಾನ್ ಬುದ್ಧ ಮತ್ತು ಸಾಹೇಬ್ ಅಂಬೇಡ್ಕರ ಅವರ ಕಂಡ ಕನಸು ನನಸಾಗುತ್ತದೆ.

    ReplyDelete
  2. Truth is always truth....tq sir great job

    ReplyDelete

Post a Comment

Popular posts from this blog

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...

ಶೌಚಾಲಯ ಶುಚಿಗೊಳಿಸುವುದನ್ನು "ಆ ಸಮುದಾಯ"ದವರೇ ಮಾಡಬೇಕೆ?

  ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು "ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ" ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು "ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,"  ಹೀಗೆ ನಾಲಿಗೆ ಮೇಲೆ ಹಿಡಿತವಿಲ್ಲದೆ ಮಾತಾಡುತ್ತ ಹೋದರು!  ಹೌದು, ಅವರು ಮಾತಾಡುತ್ತಿದ್ದದ್ದು ಅಸ್ಪೃಶ್ಯ ಸಮುದಾಯವಾದ ಪೌರಕಾರ್ಮಿಕ ಸಮುದಾಯದ ಮಹಿಳೆಯೊಬ್ಬರ ಬಗ್ಗೆ. ಎಷ್ಟು ಕ್ರೂರವಾಗಿ ಅವರು ಆಕೆಯ ಬಗ್ಗೆ ಮಾತನಾಡುತ್ತಿದ್ದರೆಂದರೆ ಅವಳು ಕೂಡ ಮನುಷ್ಯಳು, ಅವಳಿಗೂ ಕೂಡ ಮಾನವ ಹಕ್ಕಿದೆ, ಆಕೆಗೂ ಕೂಡ ಗೌರವ ಕೊಡಬೇಕು, ಊಹ್ಞೂಂ, ಇಂತಹ ಸಣ್ಣ ಮನೋಭಾವವೂ ಅವರಲ್ಲಿರಲಿಲ್ಲ. ಜಾತಿ ವ್ಯವಸ್ಥೆಯ ಭೀಕರ ಚಿತ್ರಣ ಅಲ್ಲಿ ಎದ್ದು  ಕಾಣುತ್ತಿತ್ತು.  ಈ ದಿಸೆಯಲ್ಲಿ ಉಕ್ಕಿಬರುವ ಪ್ರಶ್ನೆಗಳೇನೆಂದರೆ ಶೌಚಾಲಯ ಶುಚಿಗೊಳಿಸುವುದನ್ನು ಪೌರಕಾರ್ಮಿಕ ಸಮುದಾಯವೇ ಏಕೆ ಮಾಡಬೇಕು? ಆ ಕಾಯಕವನ್ನು ಎಲ್ಲಾ ಜಾತಿಯವರು ಏಕೆ ಮಾಡಬಾರದು? ಯಾಕೆಂದರೆ ಉದಾಹರಣೆಗೆ ವ್ಯಕ್ತಿಗಳು ಅವರು ಶೌಚ ಮಾಡಿದ ನಂತರ ಅವರದ್ದನ್ನು ಅವರೇ ತೊಳೆದುಕೊಳ್ಳುತ್ತಾರಲ್ಲವೇ? ಅದಕ್ಕೂ ಒಬ್ಬ ಆಳನ್ನು "ಇಲ್ಲ, ಇದನ್ನು ನಾನು ಮುಟ್ಟುವುದಿಲ್ಲ. ಇದು ಗಲೀಜು"ಎಂದು ನೇಮಿಸಿಕೊಳ್ಳುತ್ತಾರೆಯೇ? ಇಲ್ಲ. ಹೀಗಿರುವಾಗ ಅವರದ್ದನ್ನು ಅವರು ತೊಳೆದುಕೊಳ್ಳುವಾಗ ಶೌಚಾಲಯ ಶುಚಿಗೊಳಿಸಲು ನಿರ್ದಿಷ್ಟ ಸಮುದಾಯದವರನ್ನು ಯ...