Skip to main content

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ






"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ.

"ಹೊಲಯರು - ಮಾದರು -ರಾಜರು"
ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನಮ್ಮನ್ನು ಚಾಲುಕ್ಯರು ಎಂದು ಕರೆಯುತ್ತಿದ್ದರು" ಎಂದು ಅಲ್ಲಿಯ ಜನರು ಈಗಲೂ ಹೇಳುವುದನ್ನು ಲೇಖಕರು ಉಲ್ಲೇಖಿಸುತ್ತಾರೆ. 

ಇನ್ನು ಹಂಪಿ ಕನ್ನಡ ವಿವಿಯ ಸಂಶೋಧನೆಗಳ ಆಧಾರದಲ್ಲಿ ಲೇಖಕರು ಚಾಳುಕ್ಯರ ಸುಪ್ರಸಿದ್ಧ ದೊರೆ ಪುಲಕೇಶಿಯನ್ನು ಪ್ರಸ್ತಾಫಿಸುತ್ತ ಪುಲಕೇಶಿಯ ಮೂಲ ಪೊಲೆಕೇಶಿ, ಪೊಲೆ ಎಂಬುದು ಹೊಲೆಮನೆ ಮತ್ತು ಕೇಶಿ ಎಂಬುದು ಕೇಶವ ಎಂಬುದರ ಮೂಲವಾಗಿದೆ. ಆದ್ದರಿಂದ ಹೊಲೆಯರ ಕೇಶವನೆ ಪೊಲೆಕೇಶಿ ಅಥವಾ ಪುಲಕೇಶಿ. ಆತ ಛಲವಾದಿ ವಂಶಸ್ಥರಾದ ಚಾಲುಕ್ಯರ ದೊರೆ ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕಾಗಿ ಅವರು ಕ್ರಿ.ಶ.578 ರ ಬಾದಾಮಿ ಶಾಸನ, ಕ್ರಿ.ಶ‌.602 ರ ಮಹಾಕೂಟ ಸ್ತಂಭ ಶಾಸನ, ಕ್ರಿ. ಶ. 634 ರ ಐಹೊಳೆಯ ಶಾಸನಗಳನ್ನು ಉಲ್ಲೇಖಿಸುತ್ತಾರೆ. ಮುಖ್ಯವಾಗಿ ಭಾಷಾಶಾಸ್ತ್ರದ ದಾಖಲೆ ನೀಡುವ ಅವರು ಸುಮೇರಿಯನ್ ಮತ್ತು ಅಕ್ಕಾಡಿಯನ್ ಭಾಷೆಗಳಲ್ಲಿ ರಾಜ ಮತ್ತು ರಾಜನಿಗೆ ಸಂಬಂಧಿಸಿದ ಪದ ವ್ಯುತ್ಪತ್ತಿ ದಾಖಲಿಸಿ ಚಾಲುಕ್ಯ ಪದ ಅಲ್ಲಿಂದ ಬಂದಿದೆ ಎನ್ನುತ್ತಾರೆ.

ಅಂದಹಾಗೆ ಪುಲಕೇಶಿನ್ ಅಂದರೆ ಪೊಲಕೇಸಿನ್ ಅಂದರೆ ಹೊಲ ಮಾಡುವವನು, ಭೂಮಿ ಉಳುವವನು ಎಂದು ಅವರು ಹೇಳುತ್ತಾ, ಹೊಲ ಎಂಬ ಪದದಿಂದ ಹೊಲೆಯರು (Owner of Land) ಬಂದಿರುವುದರಿಂದ ಹೊಲೆಯರು ಈ ರಾಜ್ಯ ಆಳಿದವರು ಅದಕ್ಕಾಗಿ ಅವರು ರಾಜರು ಎಂದು ಹೇಳುತ್ತಾರೆ. ಹಾಗೆಯೇ ಹೊಲೆಯರು ಹೊಲದ ಮೂಲದವರಾದ್ದರಿಂದ ಚಾಲುಕ್ಯರು ಅಥವಾ ಚಾಳುಕ್ಯರು "ಚಳುಕ್ಯ, ಚಳುಕಿ, ಸಳುಕಿ", ಇವುಗಳನ್ನು ಸಲಿಕೆ, ಸಲಾಕೆ ಎಂಬ ಕೃಷಿ ಉಪಕರಣಗಳೊಡನೆ ಸಮೀಕರಿಸಬಹುದು. ಆದ್ದರಿಂದ ಚಾಳುಕ್ಯರು ಹೊಲೆಯ ಜನಾಂಗದವರು ಅವರ ರಾಜ ಪುಲಕೇಶಿ (ಹೊಲೆಯರ ಕೇಶಿ) ಹೊಲೆಯರವನು ಎಂದು ನಂಜುಂಡಸ್ವಾಮಿಯವರು ಹೇಳುತ್ತಾರೆ. ಇದಕ್ಕೆ ಪೂರಕವಾಗಿ ನಾವು ಬಾಬಾಸಾಹೇಬ್ ಅಂಬೇಡ್ಕರರ "ಏಷ್ಯಾ ಖಂಡದ ಬಹುಭಾಗವನ್ನು ಆಳಿದ ಭವ್ಯ ನಾಗ ಜನಾಂಗಕ್ಕೆ ಸೇರಿದವರು" ಎಂಬ ಮಾತನ್ನು ಇಲ್ಲಿ ಉಲ್ಲೇಖಿಸಬಹುದು.
***
#ಪುಲಿಕೇಶಿ

Comments

  1. ನಿಜವಾದ ಇತಿಹಾಸ ಇನ್ನೂ ಅಗಿಯಬೇಕು. ಆಗ ನಿಜ ಸತ್ಯ ಹೊರಗೆ ಬರುತ್ತದೆ. ಮೊದಲ ಧರೆಗೆ ದೊಡ್ಡವರು ಪುಸ್ತಕ ದಲ್ಲಿ ಪ್ರಕಟಗೊಂಡಿತು, ಲೇಖಕರು ಐಪಿಎಸ್ ಭರಣಿ ಸರದು.ನಂತರ ನಂಜುಂಡ ಸ್ವಾಮಿ ಐಪಿಎಸ ಇವರದು. ಅಭಿನಂದನೆಗಳು ಸರ ಇನ್ನೂ ಹೆಚ್ಚಿನ ಇತಿಹಾಸ ಹೊರಗೆ ಬರಬೇಕು ತನ್ನಿ ಸರ ಭಗವಾನ್ ಬುದ್ಧ ಮತ್ತು ಸಾಹೇಬ್ ಅಂಬೇಡ್ಕರ ಅವರ ಕಂಡ ಕನಸು ನನಸಾಗುತ್ತದೆ.

    ReplyDelete
  2. Truth is always truth....tq sir great job

    ReplyDelete

Post a Comment

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಮುಚ್ಚಿಡಲ್ಪಟ್ಟ ಅಂಬೇಡ್ಕರ್ ರ ಭವ್ಯ ಇತಿಹಾಸ -ರಘೋತ್ತಮ ಹೊ.ಬ

  ಬಾಬಾಸಾಹೇಬ್ ಡಾ||ಅಂಬೇಡ್ಕರ್ ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲಿ ಹುಟ್ಟಿದರು ಬಾಲ್ಯದಿಂದಲೆ ಅಸ್ಪೃಶ್ಯತೆಯ ನೋವನ್ನು ಅನುಭವಿಸಿದರು. ತಮ್ಮ ತಂದೆಯನ್ನು ನೋಡಲು ಗಾಡಿಯಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು. ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ' ಎನಿಸಿಕೊಂಡರು. ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ. ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದಷ್ಟೆ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ"ಮಹಾನ್ ಇತಿಹಾಸವನ್ನು" ಮುಚ್ಚಲಾಗುತ್ತಿದೆ!       ಹಾಗಿದ್ದರೆ ಅಂಬೇಡ್ಕರ್ ರವರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಅಧ್ಯಕ್ಷ   ಜಾರ್ಜ್ ಬುಷ್ "ಗಾಂಧಿ, ಠಾಗೋರ್ ಮತ್ತು ನೆಹರೂ"ರವರುಗಳನ್ನು ನವಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್ ರವರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕುಬ್ಜರನ್ನಾಗಿಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವಾಗ ಬುಷ್‍ ರಂತಹವರು ಇದಕ್ಕಿಂತ ಹೆಚ್ಚ...