Skip to main content

ಅಂದು ಪರಿಶಿಷ್ಟರ ಮೀಸಲಾತಿ ರದ್ದುಮಾಡಲು ಹೊರಟಾಗ ಅಂಬೇಡ್ಕರ್ ರವರ ಆಕ್ರೋಶ ಹೇಗಿತ್ತೆಂದರೆ... -ರಘೋತ್ತಮ ಹೊ.ಬ


1947 ಜನವರಿ ತಿಂಗಳ ಒಂದು ದಿನ "ಸಂವಿಧಾನ ಸಭೆ" (Constituent assembly) ಸಭೆ ಸೇರುತ್ತದೆ. ಅಂದು ಆ ಸಭೆ ಸೇರುವ ಉದ್ದೇಶ ಅರಿತಿದ್ದ ಬಾಬಾಸಾಹೇಬ್ ಅಂಬೇಡ್ಕರರು ಸಭೆಯ ಸದಸ್ಯರಾಗಿದ್ದರು ಕೂಡ ಸಭೆಯಿಂದ ದೂರ ಉಳಿದಿದ್ದರು. ಯಥಾಪ್ರಕಾರ ಸಂವಿಧಾನ ಸಭೆಯ "ಅಲ್ಪಸಂಖ್ಯಾತರ ಉಪಸಮಿತಿ"ಯ ಅಧ್ಯಕ್ಷರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಆ ದಿನ ಒಂದು ತಂತ್ರಗೈದು ಸಮಿತಿಯ ಅಧ್ಯಕ್ಷರಾದ ತಾವೇ ಹಾಜರಿದ್ದರೂ ಆಚಾರ್ಯ ಕೃಪಲಾನಿಯವರನ್ನು ಅಂದು ಸಭೆಯ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ತಿಳಿಸುತ್ತಾರೆ. ಅಲ್ಲದೇ ಸರ್ದಾರ್ ವಲ್ಲಭಭಾಯ್ ಪಟೇಲರು ಅಂದು ಮಂಡಿಸುವ ನಿಲುವನ್ನು ಬೆಂಬಲಿಸುವ ಸಮಿತಿಯ ಸದಸ್ಯರುಗಳಿಗೆ ರಾಜ್ಯಪಾಲ, ಮುಖ್ಯಮಂತ್ರಿ.. ಹೀಗೆ ವಿವಿಧ ಹುದ್ದೆಗಳನ್ನು ನೀಡುವ ಆಮಿಷ ಒಡ್ಡಲಾಗಿರುತ್ತದೆ ! ಈ ಹಿನ್ನೆಲೆಯಲ್ಲಿ ಅಂದು ಸಭೆ ಸೇರಿದ ಸಂವಿಧಾನ ಸಭೆಯ ಆ "ಅಲ್ಪಸಂಖ್ಯಾತರ ಉಪಸಮಿತಿ" ಕೈಗೊಂಡ ನಿರ್ಣಯವೆಂದರೆ ಎಸ್ಸಿ, ಎಸ್ಟಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಗೂ ಮೀಸಲಾತಿ ರದ್ದುಗೊಳಿಸುವ ನಿರ್ಧಾರ!! ಅಂದಹಾಗೆ ಹೀಗೆ ಎಸ್ಸಿ, ಎಸ್ಟಿಗಳಿಗೆ ಮೀಸಲಾತಿ ರದ್ದುಗೊಳಿಸುವ ನಿರ್ಧಾರ ಪ್ರಕಟಗೊಳ್ಳುತ್ತಿದ್ದಂತೆ ಮಾರನೇ ದಿನದ "ಹಿಂದೂಸ್ತಾನ್ ಟೈಮ್ಸ್" ಮತ್ತು "ಸ್ಟೇಟ್ಸ್ ಮನ್" ನಂತಹ ಇಂಗ್ಲಿಷ್ ಪತ್ರಿಕೆಗಳು ಈ ಸುದ್ದಿಗೆ ನೀಡಿದ ಹೆಡ್ ಲೈನ್ಸ್ ಏನು ಗೊತ್ತೇ? ಇಂದು Red letter day (ಇತಿಹಾಸದಲ್ಲಿ ಕೆಂಪಕ್ಷರಗಳಲ್ಲಿ ಬರೆದಿಡುವ ದಿನ)ಎಂದು!! ಅಂದರೆ ಮೀಸಲಾತಿ ರದ್ದುಗೊಳಿಸಿದ್ದು ಇವರಿಗೆ "ರೆಡ್ ಲೆಟರ್ ಡೇ"!

ಈ ಹಿನ್ನೆಲೆಯಲ್ಲಿ ಪತ್ರಿಕೆಗಳ ಈ ಹೆಡ್ ಲೈನ್ ಗಳನ್ನು ಅಂಬೇಡ್ಕರರ ಜೊತೆ ಇದ್ದ ಅವರ ಸಹಾಯಕ ಶಂಕರನಾಂದ ಶಾಸ್ತ್ರಿಯವರು ಅಂಬೇಡ್ಕರರಿಗೆ ಹೇಳುತ್ತಿದ್ದಂತೆ ಬಾಬಾಸಾಹೇಬರು ಆಕ್ರೋಶದಿಂದ ಪ್ರತಿಕ್ರಿಯಿಸಿದ್ದು ಹೇಗೆ ಗೊತ್ತೇ? This would not be a Red Letter Day, but would be a Dead Letter Day (ಈ ದಿನ ಕೆಂಪು ಅಕ್ಷರಗಳಲ್ಲಿ ಬರೆದಿಡುವ ದಿನವಲ್ಲ, ಬದಲಿಗೆ ಸತ್ತ ಅಕ್ಷರಗಳಲ್ಲಿ ಬರೆದಿಡುವ ದಿನ")! ಈ ಹಿನ್ನೆಲೆಯಲ್ಲಿ ಅರಿವಾಗುವುದು ತನ್ನ ಜನರ ಹಕ್ಕುಗಳ ರಕ್ಷಣೆ ಬಗ್ಗೆ ಬಾಬಾಸಾಹೇಬ್ ಅಂಬೇಡ್ಕರರಿಗೆ ಯಾವ ಪರಿಯ ತುಡಿತವಿತ್ತು ಮತ್ತು ಅವರ ಹಕ್ಕುಗಳಿಗೆ ಧಜ್ಕೆಯಾದಾಗ ಅವರ ಆಕ್ರೋಶ ಯಾವ ಪರಿ ಇರುತ್ತಿತ್ತು ಎಂಬುದು.

   ***

(ಆಧಾರ: My memories and Experiences of Babasaheb Ambedkar by Shankarananda shastri, Pp.134)

Comments

Popular posts from this blog

ಕೆ ಆರ್ ಎಸ್.ನಿರ್ಮಾಣ: ವಾಸ್ತವ ಇತಿಹಾಸ

        - ರಘೋತ್ತಮ ಹೊಬ  ಅದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ  ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ #ನಾಲ್ವಡಿ_ಕೃಷ್ಣರಾಜಒಡೆಯರ್‍ರವರು. ಬ್ರಿಟಿಷರೊಂದಿಗೆ  ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್  ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!    ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ  ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು. ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನ...

ಪುಲಕೇಶಿ ಹೊಲೆಯರವನೆ? ಚಾಲುಕ್ಯರು ಛಲವಾದಿಗಳೇ? -ರಘೋತ್ತಮ ಹೊ.ಬ

"ಹೊಲಯರು - ಮಾದರು -ರಾಜರು" ಎಂಬ ತಮ್ಮ ಸಂಶೋಧನಾ ಕೃತಿಯಲ್ಲಿ ಸಂಶೋಧಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆದ ಶ್ರೀ ಎಂ.ನಂಜುಂಡಸ್ವಾಮಿ ಐಪಿಎಸ್ ರವರು ಹೊಲೆಯರು ಮತ್ತು ಮಾದಿಗರು ಈ ಎರಡೂ ಜನಾಂಗಗಳು ಕರ್ನಾಟಕ ರಾಜ್ಯದಲ್ಲಿ ರಾಜರಾಗಿದ್ದವರು ರಾಜ್ಯ ಆಳಿದವರು ಎಂದು ಸಂಶೋಧನೆ ಮೂಲಕ ಸಾಧಿಸಿದ್ದಾರೆ. ಅದರಲ್ಲಿ ಬಹು ಮುಖ್ಯವಾದದ್ದು ಬಾದಾಮಿಯ ಚಾಲುಕ್ಯರು ಹೊಲೆಯ ವಂಶಸ್ಥರು ಮತ್ತು ಛಲವಾದಿ ಜನಾಂಗದವರು ಎಂದು ಲೇಖಕರು ತಮ್ಮ ಭಾಷಾಶಾಸ್ತ್ರದ ಸಂಶೋಧನೆಯ ಆಧಾರದಲ್ಲಿ ಹೇಳುತ್ತಾರೆ. "ಹೊಲಯರು - ಮಾದರು -ರಾಜರು" ಆ ಕೃತಿಯಲ್ಲಿ ಪುಟ ಸಂಖ್ಯೆ 96ರಲ್ಲಿ  ನಂಜುಂಡಸ್ವಾಮಿಯವರು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ ಮತ್ತು ಬೇಲೂರು ಚನ್ನಕೇಶವ ದೇವಾಲಯಗಳಲ್ಲಿ ಹೊಲೆಯನಿಗೆ ನೀಡುವ ಗೌರವ ಉಲ್ಲೇಖಿಸುತ್ತ "ಆ ಗೌರವ ರಾಜನಿಗೆ ನೀಡುವ ಗೌರವದಂತಿದೆ. ಹೊಲೆಯ ರಾಜನಿಂದಲೇ ಆ ದೇವಾಲಯ ನಿರ್ಮಾಣವಾಗಿರುವುದರ ಸಂಕೇತವಾಗಿ ಆತನಿಗೆ ಈಗಲೂ ಆ ಗೌರವ ಸಿಗುತ್ತಿದೆ" ಎಂದು ಹೇಳುತ್ತಾರೆ. ಇನ್ನೂ ಬಾಗಲಕೋಟೆಯ ದೇಸಾಯಿಗಳು ಈಗಲೂ ಹೊಲೆಯರ ಮನೆಯಿಂದ ಬೆಂಕಿ ತರುವ ಸಂಪ್ರದಾಯವನ್ನು ಸಹ ಲೇಖಕರು ಉಲ್ಲೇಖಿಸುತ್ತಾರೆ. ಆ  ಹಿನ್ನೆಲೆಯಲ್ಲಿ "ಹಿಂದೆ ನಾವು ಈ ನಾಡನ್ನು ಆಳಿದ ರಾಜರು. ಅದಕ್ಕಾಗಿ ನಮ್ಮ ಬಳಿ ಸಾಂಕೇತಿಕವಾಗಿ ಈಗಲೂ ಬಂದು ದೇಸಾಯಿಗಳು ಬೆಂಕಿ ಪಡೆದುಕೊಳ್ಳುತ್ತಿದ್ದಾರೆ. ಈಗ ನಮ್ಮನ್ನು ಛಲವಾದಿಗಳು ಎನ್ನುವರು. ಹಿಂದೆ ನ...

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ

ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ.  ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯ...