Skip to main content

ಅವಕಾಶ ಕಿತ್ತುಕೊಳ್ಳಬೇಕು -ರಘೋತ್ತಮ ಹೊ.ಬ


ಶೋಷಿತ ಸಮುದಾಯಗಳ ಎಷ್ಟೋ ಜನ ಯಾರಾದರೂ ನಮ್ಮನ್ನು ನಮ್ಮ ಒಳ್ಳೆಯತನ ನೋಡಿ ಉದ್ಧಾರ ಮಾಡುತ್ತಾರೆ ಎಂದುಕೊಳ್ಳುತ್ತಾರೆ. ವಾಸ್ತವ ಎಂದರೆ ಅದು ಹಾಗಲ್ಲ ಎಂಬುದು. ಉದಾಹರಣೆಗೆ ಕಚೇರಿಗಳಲ್ಲಿ "ಡಿ" ಗ್ರೂಪ್ ನೌಕರಿ ಕೆಲಸ ಒಬ್ಬ ಮಾಡುತ್ತಿರುತ್ತಾನೆ ಎಂದುಕೊಳ್ಳಿ. ಪ್ರಶ್ನೆ ಎಂದರೆ ಅಲ್ಲಿಯ ಅಧಿಕಾರಿ ಆ ಡಿ ಗ್ರೂಪ್ ನೌಕರರನಿಗೆ ಆತನ ಒಳ್ಳೆಯತನ ನೋಡಿ ಕರೆದು ತನ್ನ ಸ್ಥಾನ ಕೊಡುತ್ತಾನೆಯೇ? ಇಲ್ಲ. ಹೆಚ್ಚೆಂದರೆ ಅದನ್ನು ಆತ ಆತನ ನಿಷ್ಠೆ ಎಂದುಕೊಳ್ಳಬಹುದು ಒಂದಷ್ಟು ಸಿಂಪಥಿ ತೋರಬಹುದು ಅಷ್ಟೇ. ಭಾರತದ ಸಾಮಾಜಿಕ ವ್ಯವಸ್ಥೆಯು ಕೂಡ ಹೀಗೇನೆ‌. ಹಾಗಿದ್ದರೆ ಡಿ ಗ್ರೂಪ್ ನೌಕರ ಏನು ಮಾಡಬಹುದು? ತನ್ನ ಮಗನನ್ನು ಅಥವಾ ಮಗಳನ್ನು ಆ ಅಧಿಕಾರಿ ಮಟ್ಟಕ್ಕೆ ಓದಿಸಿ ಆ ಸ್ಥಾನ ಪಡೆಯಬಹುದು ಅವಕಾಶ ಪಡೆಯಬಹುದು. ಶೋಷಿತ ಸಮುದಾಯಗಳು ಅಷ್ಟೇ, ಚೆನ್ನಾಗಿ ಶಿಕ್ಷಣ ಪಡೆದು ಉನ್ನತ ಉದ್ಯೋಗ ಪಡೆದರೆ ಅಥವಾ ಪ್ರಸ್ತುತ ದಿನಗಳಲ್ಲಿ ಬುದ್ಧಿವಂತಿಕೆಯಿಂದ ಯಾವುದಾದರೂ ಬಿಸಿನೆಸ್ ನಲ್ಲಿ do or die ಮಾದರಿಯಲ್ಲಿ ಶ್ರಮ ಹಾಕಿ ಯಶಸ್ಸು ಪಡೆದರೆ ಆ ಸ್ಥಾನ ಪಡೆಯಬಹುದು. ಯಾರೂ ಕೂಡ ಕರೆದು ಅವಕಾಶ ಕೊಡುವುದಿಲ್ಲ. 

ಘಟನೆಯೊಂದನ್ನು ಹೇಳುವುದಾದರೆ, ಒಂದು ಸಾರ್ವಜನಿಕ ಕಾರ್ಯಕ್ರಮ ನಡೆದಿತ್ತು. ನಾನು ವಯಕ್ತಿಕವಾಗಿ ಯಾರು ನನ್ನನ್ನು ಕರೆಯಲಿ ಬಿಡಲಿ ಎಂದು ನನ್ನ ಸ್ಥಾನವನ್ನು ಭದ್ರವಾಗಿ ಪಡೆದೆ ಒಂದು ಚೇರ್ ಮೇಲೆ ನಾನೇ ಹೋಗಿ ಕುಳಿತುಕೊಳ್ಳುವುದರ ಮೂಲಕ. ಆದರೆ ದಲಿತ ಸಮುದಾಯದ ಒಬ್ಬ ನೌಕರ ಸಂಘಟಕರು ತನ್ನನ್ನು ಕರೆಯಲಿ ಎಂದು ದೂರದಲ್ಲೆಲ್ಲೊ ಹಿಂದೆ ನಿಂತಿದ್ದಿರು. ಸಂಘಟಕರು ಅವರನ್ನು ಉದಾಸೀನ ಮಾಡೇ ಕಾರ್ಯಕ್ರಮ ಪೂರ್ಣಗೊಳಿಸುತ್ತಿದ್ದರು! ಈ ಸಂದರ್ಭದಲ್ಲಿ ಕೆಲವರ ಗಮನಕ್ಕೆ ಬಂದ ಇದು ಈ ರೀತಿ ಮಾಡಬಾರದು, ಅವರನ್ನು ವೇದಿಕೆಗೆ ಕರೆಯಬೇಕು ಎಂದು ಮಾತಾಡಿಕೊಳ್ಳತೊಡಗಿದರು. ಇದನ್ನೆಲ್ಲ ಗಮನಿಸುತ್ತಿದ್ದ ನಾನು ಎಂದಿಗೆ ಈ ತಾರತಮ್ಯ ಕೊನೆಗೊಳ್ಳುತ್ತದೆ ಎಂದು ಒಳಗೊಳಗೆ ಕುದಿಯುತ್ತಿದ್ದೆ, ಆದರೂ ತೋರ್ಪಡಿಸದೆ ಸುಮ್ಮನಿದ್ದೆ‌. ಕೊನೆಗೆ ಫೊಟೊ ಸೆಷನ್ ಬಂತು. ಆಗಲು ದಲಿತ ಸಮುದಾಯದ ಆ ವ್ಯಕ್ತಿ ತನ್ನನ್ನು ಕರೆಯಲಿ ಎಂದೇ ಹಿಂದೆ ನಿಂತಿದ್ದರು. ಕರೆದರು ಕೂಡ ವೇದಿಕೆಗೆ ಆಹ್ವಾನಿಸದ ಕಾರಣಿಟ್ಟುಕೊಂಡು ಬರಲಿಲ್ಲ. ತಕ್ಷಣ ಎಚ್ಚೆತ್ತ ನಾನು "ಬನ್ನಿ ಇಲ್ಲಿ, ಇಲ್ಲಿ ಯಾರು ಮೇಲ್ಜಾತಿ ಅಲ್ಲ ಯಾರು ಕೆಳಜಾತಿ ಅಲ್ಲ, ಇದು ಸಾರ್ವಜನಿಕ ಕಾರ್ಯಕ್ರಮ, ಯಾರಪ್ಪನ ಮನೆಯ ಕಾರ್ಯಕ್ರಮ ಇದಲ್ಲ, ಬನ್ನಿ" ಎಂದು ಆಕ್ರೋಶದಿಂದ ಹೇಳಿದೆ. ನನ್ನ ಮಾತಿಗೆ ದನಿಕೊಟ್ಟ ಅವರು ತಕ್ಷಣ ಬಂದು ಕಾರ್ಯಕ್ರಮ ದಲ್ಲಿ ಆಸೀನರಾದರು. ಇತರರು ನನ್ನ ಈ ಆಕ್ರೋಶ ನೋಡಿ ಅರೆಕ್ಷಣ ಗಲಿಬಿಲಿಗೊಂಡರು.

 ಹೌದು, ಅವಕಾಶಗಳನ್ನು ಯಾರೂ ಕರೆದುಕೊಡುವುದಿಲ್ಲ. ಅದನ್ನು ನಾವೇ ಸೃಷ್ಟಿಸಿಕೊಳ್ಳಬೇಕು ಸಾಧ್ಯವಾದರೆ ಹೋರಾಟ ಮತ್ತು ಪ್ರತಿಭಟನೆ ಮೂಲಕ ಅದನ್ನು ಕಿತ್ತುಕೊಳ್ಳಬೇಕು. ನಾವು ಅವಕಾಶ ಕೊಡುವರು ಎಂದು ಕಾಯುತ್ತಾ ಕುಳಿತರೆ ಜಾತಿವಾದಿ ಸಮಾಜದ ವ್ಯಕ್ತಿಗಳು ಉದಾಸೀನ ಮಾಡುತ್ತ ನಡೆಯುತ್ತಾರೆ‌. ಹೆಚ್ಚೆಂದರೆ ಮೇಲಿನ ಡಿ ಗ್ರೂಪ್ ನೌಕರನ ಉದಾಹರಣೆ ರೀತಿ ಸಿಂಪಥಿ ತೋರಬಹುದು. ಆದರೆ ಅವಕಾಶ? ನಮ್ಮ ಪ್ರತಿಭೆಗೆ, ಬುದ್ಧಿವಂತಿಕೆಗೆ ತಕ್ಕ ಅವಕಾಶ? ಜಾತಿವಾದಿ ಸಮಾಜ ಹೀಗೆಯೇ ನೂರಾರು ವರ್ಷಗಳಿಂದ ನಮ್ಮನ್ನು ಉದಾಸೀನ ಮಾಡುತ್ತ ಅಥವಾ ನಯವಾದ ಮಾತುಗಳಲ್ಲಿ ವಂಚಿಸುತ್ತ, ಕೊನೆಗೆ ಹಿಂಸೆಯ ಅಸ್ತ್ತ ಬಳಸಿ ಅವಕಾಶಗಳಿಂದ ವಂಚಿಸಿದೆ. ಇಲ್ಲಿ ಒಳ್ಳೆಯತನ ಎಲ್ಲಾ ಸಂದರ್ಭಗಳಲ್ಲು ಉಪಯೋಗಕ್ಕೆ ಬರುವುದಿಲ್ಲ. ನಮ್ಮ ಸಾಂವಿಧಾನಿಕ ಹಕ್ಕುಗಳನ್ನು ಅರಿತು ಧೈರ್ಯದಿಂದ ಅವಕಾಶಗಳನ್ನು ಪಡೆದುಕೊಳ್ಳಬೇಕಾಗುತ್ತದೆ, ಆಗಲಿಲ್ಲ ಅಂದರೆ ಕಿತ್ತುಕೊಳ್ಳಬೇಕಾಗುತ್ತದೆ. ಕಾಯುತ್ತ ಕುಳಿತರೆ ನಾಶ ಖಚಿತ. ***

Comments

Popular posts from this blog

ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು

  ಹಿಂದೂ ಮತ್ತು ಅಸ್ಪೃಶ್ಯನೊಬ್ಬ ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಭೇಟಿಯಾದಾಗ... "ಯಾವಾಗಲಾದರೊಮ್ಮೆ ಅಕ್ಕಪಕ್ಕ ಕುಳಿತು ಪ್ರಯಾಣ ಮಾಡುವ ಸಂದರ್ಭದಲ್ಲಿ ಪರಸ್ಪರ ಜಾತಿ ತಿಳಿಯದಿದ್ದಾಗ ಜಾತಿವಾದಿ ಹಿಂದೂಗಳು ಮತ್ತು ಅಸ್ಪೃಶ್ಯರು ತುಂಬಾ ಆಪ್ತ ಸ್ನೇಹಿತರಂತೆ ವರ್ತಿಸುತ್ತಾರೆ. ಪರಸ್ಪರ ಬೀಡಿ, ಸಿಗರೆಟ್, ಹಣ್ಣುಗಳು, ಎಲೆ- ಅಡಿಕೆ ಹೀಗೆ ಅವರು ಹಂಚಿಕೊಳ್ಳುತ್ತಾರೆ. ಆದರೆ ಇದ್ದಕ್ಕಿದ್ದಂತೆ ಆ ಹಿಂದೂ ವ್ಯಕ್ತಿಗೆ ತಾನು ಇಷ್ಟು ಹೊತ್ತು ಮಾತನಾಡುತ್ತಿದ್ದ ವ್ಯಕ್ತಿ ಅಸ್ಪೃಶ್ಯ ಎಂದು ತಿಳಿಯುತ್ತಿದ್ದಂತೆ ಆತನ ಮನಸ್ಸಿನಲ್ಲಿ ದ್ವೇಷದ ಮನೋಭಾವ ಮೊಳಕೆಯೊಡೆಯುತ್ತದೆ, ತಾನು ಮೋಸಗೊಳಗಾದೆನೆಲ್ಲ ಎಂದು ಆತ ಯೋಚಿಸಲು ಆರಂಭಿಸುತ್ತಾನೆ. ಆತ ಕೋಪಗೊಳ್ಳುತ್ತಾನೆ. ಅಂತಿಮವಾಗಿ ತಾತ್ಕಾಲಿಕ ಆ ಸ್ನೇಹ ಜಗಳ ಮತ್ತು ಬೈಗುಳದ ಮೂಲಕ ಅಂತ್ಯಗೊಳ್ಳುತ್ತದೆ". -ಡಾ.ಬಿ.ಆರ್.ಅಂಬೇಡ್ಕರ್ ( Ambedkar writings and speeches, Vol.17, Part 3, Pp.132) ಕನ್ನಡಕ್ಕೆ: ರಘೋತ್ತಮ ಹೊಬ)

ಮುಂದೊಂದು ದಿನ ಎಲ್ಲರೂ ಬೌದ್ಧರಾಗಲಿದ್ದಾರೆ -ಡಾ.ಅಂಬೇಡ್ಕರ್

  "ಪ್ರತಿಯೊಂದು ಧರ್ಮವು ಉತ್ತರಿಸಬೇಕಾದ ಒಂದು ಪ್ರಶ್ನೆ ಇದೆ. ಅದೆಂದರೆ ತಳ ಸಮುದಾಯ ಮತ್ತು ದೌರ್ಜನ್ಯ ಪೀಡಿತ ಸಮುದಾಯಗಳಿಗೆ ಧರ್ಮವೊಂದು ನೀಡಬಹುದಾದ ನೈತಿಕ ಮತ್ತು ಬೌದ್ಧಿಕ ಬೆಂಬಲವಾದರು ಏನು ಎಂಬುದು? ಧರ್ಮವೊಂದು ಅಂತಹದ್ದೊಂದು ಬೆಂಬಲ ನೀಡಲಿಲ್ಲ ಎಂದರೆ ಅದು ದುರದೃಷ್ಟಕರ ಪರಿಸ್ಥಿತಿಯಲ್ಲಿ ಇದೆ ಎಂದೆ ಅರ್ಥ. ಆದ್ದರಿಂದ  ಹಿಂದೂ ಧರ್ಮವು  ಕೋಟ್ಯಾಂತರ ಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ನೈತಿಕ ಮತ್ತು ಬೌದ್ಧಿಕ ಬೆಂಬಲ ನೀಡುತ್ತದೆಯೇ? ಖಂಡಿತ ಇಲ್ಲ. ಈ ನಿಟ್ಟಿನಲ್ಲಿ ತಮಗೆ ಬೌದ್ಧಿಕ ಮತ್ತು ನೈತಿಕ ಬೆಂಬಲ ನೀಡದ ಹಿಂದೂ ಧರ್ಮದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಜನರು ಇರಲು ಬಯಸುತ್ತಾರೆ ಎಂದು ಹಿಂದೂಗಳು ಅಪೇಕ್ಷೆ ಪಡಲು ಸಾಧ್ಯವೇ? ಅಂದಹಾಗೆ ಅಂತಹದ್ದೊಂದು ಅಪೇಕ್ಷೆ ಅಕ್ಷರಶಃ ವ್ಯರ್ಥದ್ದು.  "ಯಾಕೆಂದರೆ ಹಿಂದೂ ಧರ್ಮ ಅದು ಜ್ವಾಲಾಮುಖಿಯ ಮೇಲೆ ತೇಲುತ್ತಿದೆ. ಆ ನಿಟ್ಟಿನಲ್ಲಿ ಇಂದು ಅದು(ಜ್ವಾಲಾಮುಖಿ) ನಂದಿದ ಹಾಗೆ ಕಾಣುತ್ತಿದೆ. ಆದರೆ ವಾಸ್ತವ ಅದಲ್ಲ‌‌. ಮೊಂದೊಂದು ದಿನ ಈ ಕೋಟ್ಯಂತರ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ) ಮಂದಿಗೆ ತಮ್ಮ ಈ ಹೀನ ಸ್ಥಿತಿಯ ಬಗ್ಗೆ ಅರಿವಾದಾಗ ಮತ್ತು ಅದಕ್ಕೆ ಹಿಂದೂ ಧರ್ಮದ ಸಾಮಾಜಿಕ ತತ್ವ ಕಾರಣ ಎಂದು ತಿಳಿದಾಗ ಆ ಜ್ವಾಲಾಮುಖಿ ಜೀವಂತಗೊಳ್ಳಲಿದೆ. ಇದಕ್ಕೆ ಸಾಕ್ಷಿಯಾಗಿ ರೋಮನ್ ಸಾಮ್ರಾಜ್ಯದಲ್ಲಿ ಕ್ರಿಶ್ಚಿಯ...

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್: ಮರೆಯಬಾರದ ಮೈಸೂರು ದೊರೆ

  ನಾಲ್ವಡಿ ಕೃಷ್ಣರಾಜ ಒಡೆಯರ್ -ರಘೋತ್ತಮ ಹೊಬ "ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು" ಇದು ಬಾಬಾಸಾಹೇಬ್ ಡಾ.ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ ಮೈಸೂರು ಭಾಗ ಅಭಿವೃದ್ಧಿಯಲ್ಲಿ ಮಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಅದರ ಭವ್ಯ ಇತಿಹಾಸ. ಇಂತಹ ಭವ್ಯ ಇತಿಹಾಸದ ನಿರ್ಮಾತೃವಾಗಿ ತನ್ಮೂಲಕ ಮಾದರಿ ಮೈಸೂರಿಗೆ ಮುನ್ನುಡಿ ಬರೆದ ಧೃವತಾರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್. ಆಳರಸರಿಗೆ ಮಾದರಿಯಾದ ರಾಜಯೋಗಿ.  ನಾಲ್ವಡಿಯವರು ಜನಿಸಿದ್ದು 1884 ರ ಜೂನ್ 4ರಂದು. ತಂದೆ ಶ್ರೀ ಚಾಮರಾಜ ಒಡೆಯರ್, ತಾಯಿ ಕೆಂಪನಂಜಮ್ಮಣ್ಣಿ (ವಾಣಿ ವಿಲಾಸ ಸನ್ನಿಧಾನ). ಬಾಲಕ ಕೃಷ್ಣರಾಜರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಮೈಸೂರಿನಲ್ಲೇ. ರಾಯಲ್ ಸ್ಕೂಲ್ ಎಂಬ ಪ್ರತ್ಯೇಕ ಶಾಲೆಯಲ್ಲಿ ಇವರ ಸಹಪಾಠಿಗಳಾಗಿದ್ದವರು ಮಿರ್ಜಾ  ಇಸ್ಮಾಯಿಲ್, ಲಕ್ಷ್ಮೀಕಾಂತರಾಜ್ ಅರಸ್, ಮುಂತಾದವರು. 1894 ರಲ್ಲಿ ತಂದೆ ಚಾಮರಾಜ ಒಡೆಯರ್ ರವರ ನಿಧನದಿಂದಾಗಿ ಬಾಲಕ ಕೃಷ್ಣರಾಜನಿಗೆ ರಾಜ್ಯದ ಹೊಣೆ ಬಿದ್ದಾಗ ಅವರಿಗೆ ಕೇವಲ 10 ವರ್ಷ. ಪೆಬ್ರವರಿ 1, 1895 ರಲ್ಲಿ ಯುವರಾಜ ಕೃಷ್ಣರಾಜರಿಗೆ ಪಟ್ಟಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಬ್ರಿಟಿಷ್ ರಿಜೆನ್ಸಿ ಆಳ್ವಿಕೆಯಲ್ಲಿ ಮೈಸೂರಿನ ಗೌರ್ನರ್ ಮತ್ತು ಮಹಾರಾಜರ ಟ್ಯೂಟರ...